Ad Widget

ಕಾಪು: ಹೆತ್ತವರ ಬುದ್ದಿಮಾತಿಗೆ ನೊಂದು ಬಾಲಕಿ ಆತ್ಮಹತ್ಯೆ

ಕಾಪು, ಮೇ ೧೭: ಮೊಬೈಲ್ ಗೇಮ್ ಅತಿಯಾಗಿ ಆಡದಂತೆ ತಾಯಿಯ ಬುದ್ದಿಮಾತಿಗೆ ನೊಂದು ೧೬ರ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ.೧೫ರ ರಾತ್ರಿ ಇಲ್ಲಿನ ಮಣಿಪುರ ಗ್ರಾಮ ಕೋಟೆ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಶಾಬನ್ ಹಾಗೂ ಜುಬೇದಾ ಅವರ ಪುತ್ರಿ ಸುಹೇಬತ್ ಅಸ್ಲಮೀಯಾ(೧೬) ಎಂದು ಗುರುತಿಸಲಾಗಿದೆ. ಈಕೆಗೆ ಮೇ ೧೫ ರಂದು ರಾತ್ರಿ ೮.೦೦ ಗಂಟೆ ವೇಳೆಗೆ ತಾಯಿಯು ಮೊಬೈಲ್‌ನಲ್ಲಿ ಆಟ ಆಡದಂತೆ ಬುದ್ದಿ ಹೇಳಿ ಮೊಬೈಲ್‌ನ್ನು ತೆಗೆದುಕೊಂಡಿದ್ದರು.
ಸ್ವಲ್ಪ ಸಮಯದ ಬಳಿಕ ಮಗಳು ಮನೆಯಲ್ಲಿರದಿರುವುದನ್ನು ಕಂಡು ಗಾಬರಿಗೊಂಡ ಹೆತ್ತವರು ಹುಡುಕಲಾರಂಭಿಸಿದಾಗ ಮನೆಯಿಂದ ಸ್ವಲ್ಪ ದೂರದಲ್ಲಿರುವ ಸರ್ಕಾರಿ ಬಾವಿ ಹತ್ತಿರ ಜನ ಸೇರಿದ್ದನ್ನು ಗಮನಿಸಿ ಹೋಗಿದ್ದಾರೆ. ಈ ವೇಳೆ ಮಗಳು ಬಾವಿ ನೀರಿನಲ್ಲಿ ಮುಳುಗುತ್ತಿರುವುದನ್ನು ತಿಳಿದು ಗಾಬರಿಯಾಗಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬಾಲಕಿಯನ್ನು ಮೇಲಕ್ಕೆತ್ತಿದ ವೇಳೆಗಾಗಲೇ ಆಕೆ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget

Leave a Comment

Your email address will not be published. Required fields are marked *