ಮಂಗಳೂರು: ಲಾರಿ ಢಿಕ್ಕಿ- ಸೈಕಲ್ ಸವಾರ ಸ್ಥಳದಲ್ಲೇ ಸಾವು

ಮಂಗಳೂರು, ಮೇ ೨೧: ರಾ.ಹೆ.ಯ ಬೈಕಂಪಾಡಿಯಲ್ಲಿ ಲಾರಿಯೊಂದು ಸೈಕಲ್ ಸವಾರನಿಗೆ  ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮಧು ಕೆ. ಮೃತ ಸೈಕಲ್ ಸವಾರ ಎಂದು ಗುರುತಿಸಲಾಗಿದೆ. ಈತ ಹೈರೇಂಜ್ ಸೆಕ್ಯುರಿಟಿ ಸರ್ವಿಸಸ್‌ನ ಉದ್ಯೋಗಿ ಎಂದು ತಿಳಿದುಬಂದಿದೆ.
ಈತ ಸೈಕಲ್‌ನಲ್ಲಿ ತೆರಳುತ್ತಿದ್ದಾಗ ಅತೀ ವೇಗವಾಗಿ, ಅಜಾಗರೂಕತೆಯಿಂದ ಧಾವಿಸಿ ಬಂದ ಲಾರಿ ಢಿಕ್ಕಿ ಹೊಡೆಯಿತು ಎನ್ನಲಾಗಿದ್ದು.

Ad Widget ... ..

ಇದರಿಂದ ಸೈಕಲ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *