Ad Widget

ನಾನೇ ಈ ರೀತಿ ಪರದಾಡಬೇಕಾದ್ರೆ ಜನಸಾಮಾನ್ಯರ ಕಥೆಯೇನು…?: ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಸೋಂಕಿಗೆ ಲಸಿಕೆ ನೀಡಲು ಸರಕಾರ ಖಾಸಗಿಯವರಿಗೆ ಅವಕಾಶ ನೀಡಿದೆ. ಆದರೆ ಇದನ್ನೇ ಬಂಡವಾಳವಾಗಿ ಬಳಸಿಕೊಂಡಿರುವ ಖಾಸಗಿ ಆಸ್ಪತ್ರೆಗಳು ಜನರಿಂದ ಹಣ ಲೂಟಿ ಹೊಡೆಯುತ್ತಿವೆ. ಒಂದೊಂದು ಆಸ್ಪತ್ರೆಯಲ್ಲೂ ಲಸಿಕೆಗೆ ಒಂದೊಂದು ದರವಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಲಸಿಕೆಗಳಿಗೆ ಏಕರೂಪದ ದರ ನಿಗದಿ ಮಾಡಲೇಬೇಕು ಎಂದು ಆಗ್ರಹಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಿದ್ದರಾಮಯ್ಯ, “ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಸಿಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಒಂದೊಂದು ರೀತಿ ದರವಿದೆ. ೯೦೦ರೂ ಇಂದ ೧೨೫೦ರೂವರೆಗೆ ದರ ನಿಗದಿ ಮಾಡಲಾಗಿದೆ. ಹೀಗಾದರೆ ಬಡವರ ಸ್ಥಿತಿ ಏನು?” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಸರ್ಕಾರಿ ಆಸ್ಪತ್ರೆಗಳಿಗೆ ಸಿಗದ ಲಸಿಕೆ ಖಾಸಗಿಯವರಿಗೆ ಹೇಗೆ ಸಿಗುತ್ತಿದೆ ಎಂದು ಕೇಳಿದ್ದಾರೆ.

Ad Widget . Ad Widget .

ರಾಜ್ಯದಲ್ಲಿನ ಆಮ್ಲಜನಕ ಸರಬರಾಜು ಕುರಿತು ಮಾತನಾಡಿರುವ ಅವರು, “ರಾಜ್ಯಕ್ಕೆ ಒಂದು ದಿನಕ್ಕೆ ೧೭೫೦ ಮೆಟ್ರಿಕ್ ಟನ್ ಆಕ್ಸಿಜನ್ ಬೇಕು. ಆದರೆ ಬರುತ್ತಿರುವುದು ೧೦೫೦ ಮೆಟ್ರಿಕ್ ಟನ್ ಮಾತ್ರ. ಇನ್ನೂ ೭೦೦ ಮೆಟ್ರಿಕ್ ಟನ್ ಕೊರತೆಯಿದೆ” ಎಂದು ಹೇಳಿದರು.

ಈಗ ಬ್ಲಾಕ್, ವೈಟ್, ಯೆಲ್ಲೋ ಫಂಗಸ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿದೆ. ನನ್ನ ಪರಿಚಿತರೊಬ್ಬರಿಗೆ ಬ್ಲಾಕ್ ಫಂಗಸ್ ಬಂದಿದೆ. ದಿನಕ್ಕೆ ನಾಲ್ಕು ಇಂಜೆಕ್ಷನ್ ತೆಗೆದುಕೊಳ್ಳಬೇಕು. ಆ ಇಂಜೆಕ್ಷನ್ ಗಾಗಿ ನಾನು ಪರದಾಡಿದ್ದೇನೆ. ಅಶೋಕ್, ಸುಧಾಕರ್‌ಗೂ ಫೋನ್ ಮಾಡಿದೆ. ಖಾಸಗಿ ಆಸ್ಪತ್ರೆಯವರಿಗೂ ಕಾಲ್ ಮಾಡಿದೆ. ಕೊನೆಗೆ ೫೮ ಇಂಜೆಕ್ಷನ್ ಒದಗಿಸೋಕೆ ಪರದಾಡುವಂತಾಯಿತು. ನಾನೇ ಈ ರೀತಿ ಪರದಾಡಬೇಕಾದ್ರೆ ಸಾಮಾನ್ಯರ ಕಥೆಯೇನು ಎಂದು ಕೇಳಿದರು. ಕೊರೊನಾ ಮೂರನೇ ಅಲೆ ಮಕ್ಕಳಿಗೆ ಅಪಾಯಕಾರಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೀಗಿದ್ದರೂ ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಆರೋಪಿಸಿದರು.

Leave a Comment

Your email address will not be published. Required fields are marked *