ಬೆಂಗಳೂರು: ಕೊರೊನಾ ಮಹಾಮಾರಿಯ ವಿರುದ್ಧ ಎಡೆಬಿಡದೆ ಹೋರಾಡುತ್ತಿರುವ 42,574 ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ತಲಾ 3,000 ರೂಪಾಯಿ ಪ್ರೋತ್ಸಾಹ ಧನ ಮಂಜೂರು ಮಾಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಶಿಕ್ಷಣ ಸಚಿವ ಸುಧಾಕರ್ ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಸಲ್ಲಿಸುತ್ತಿರುವ ಅನನ್ಯ ಸೇವೆಯನ್ನು ಗುರುತಿಸಿ ಆರ್ಥಿಕ ಪ್ಯಾಕೇಜ್-2 ರಲ್ಲಿ ಪರಿಹಾರ ಘೋಷಿಸಲಾಗಿದೆ, ರಾಜ್ಯದ 42,574 ಆಶಾ ಕಾರ್ಯಕರ್ತೆಯರಿಗೆ ಒಟ್ಟು ₹12.75 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.