Ad Widget

ಕಾರು-ಬೈಕ್ ಡಿಕ್ಕಿ: ಯಮನಪಾಲಾದ ಅಣ್ಣ-ತಂಗಿ ಹಾಗೂ ಮಗು

ರಾಯಚೂರು: ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ವರ್ಷದ ಮಗು ಸಹಿತ ಅಣ್ಣ-ತಂಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಗರಾಳ ಕ್ರಾಸ್ ಬಳಿ ಈ ಅಪಘಾತ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಲಿಂಗಸುಗೂರು ತಾಲೂಕಿನ ಗುಂತಗೋಳ ಗ್ರಾಮದ ಬಸವರಾಜ (32), ಪಲ್ಲವಿ (23) ಮತ್ತು ಸಂಗಮೇಶ (3) ಮೃತಪಟ್ಟವರು. ಬಸವರಾಜ ಮತ್ತು ಪಲ್ಲವಿ ಸೋದರ ಸಂಬಂಧಿಗಳಾಗಿದ್ದು, ಇವರು ನಾಗರಹಾಳದಲ್ಲಿನ ಸಹೋದರಿಯ ಮನೆಗೆ ಹೋಗಿ ವಾಪಸ್​ ಬರುವಾಗ ಈ ದುರ್ಘಟನೆ ಸಂಭವಿಸಿದೆ.

Ad Widget . Ad Widget .

ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ ಇವರ ಜತೆ ಬಸವರಾಜನ ಅಕ್ಕನ ಮಗ ಮೂರು ವರ್ಷದ ಸಂಗಮೇಶ ಕೂಡ ಇದ್ದ. ಮುದಗಲ್​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತವಾಗುತ್ತಿದ್ದಂತೆ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ.

Leave a Comment

Your email address will not be published. Required fields are marked *