ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿಎಂ ಬಿ.ಎಸ್ ಯಡಿಯೂರಪ್ಪ

Ad Widget ... ..

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ, ಬಿಜೆಪಿಯಲ್ಲಿನ ಅಸಮಾಧಾನದ ಬೆನ್ನಲ್ಲೇ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

Ad Widget

ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಈ ಮೂಲಕ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆ ಮರೆಯಲ್ಲಿ ಕೆಲ ಸಚಿವರು-ಶಾಸಕರು ನಡೆಸುತ್ತಿದ್ದ ಯತ್ನಕ್ಕೆ ಹಾಗೂ ನಾಯಕರ ಅನಗತ್ಯ ಹೇಳಿಕೆಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

Leave a Comment

Your email address will not be published. Required fields are marked *