ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸೋಣ | ಲಾಕ್ಡೌನ್ ನಿಂದ ಹಿಂದೆ ಸರಿದ ಉದ್ಧವ್ ಠಾಕ್ರೆ

ಮಹಾರಾಷ್ಟ್ರ: ರಾಜ್ಯದಲ್ಲಿ ಸದ್ಯ ಲಾಕ್ಡೌನ್ ಇದ್ದು ಹಂತಹಂತವಾಗಿ ಅನ್ಲಾಕ್ ಮಾಡಲು ರಾಜ್ಯಸರ್ಕಾರ ನಿರ್ಧರಿಸಿದೆ. ಇನ್ನು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯದ ಜನತೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೆ ನೀಡಿದ್ದಾರೆ.

Ad Widget ... ..

ಸೋಮವಾರದಿಂದ ಮಹಾರಾಷ್ಟ್ರದಲ್ಲಿ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಒಂದೇ ಬಾರಿಗೆ ಯಾವ ನಿರ್ಧಾರವನ್ನೂ ತೆಗೆದುಕೊಳ್ಳುತ್ತಿಲ್ಲ. ಸೋಂಕು ದೃಢೀಕರಣ ಪ್ರಮಾಣ ಮತ್ತು ಆಮ್ಲಜನಕ, ಹಾಸಿಗೆಗಳ ಲಭ್ಯತೆ ಆಧಾರದಲ್ಲಿ ರಾಜ್ಯವನ್ನು ಐದು ಹಂತಗಳಲ್ಲಿ ವಿಂಗಡಿಸಿ ಲಾಕ್‌ಡೌನ್ ತೆರವು ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.
ಯಾವ ರೀತಿಯ ನಿರ್ಬಂಧಗಳ ಅಗತ್ಯವಿದೆಯೆಂದು ಸ್ಥಳಿಯಾಡಳಿತ ನಿರ್ಧರಿಸಲಿದೆ. ಲಾಕ್ಡೌನ್ ನಾಕ್ಡೌನ್ ಗಳನ್ನು ನಾನು ಇಂದಿಗೂ ಬಯಸುವುದಿಲ್ಲ ಇದು ಜನರನ್ನು ಅತಿಯಾಗಿ ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಠಾಕ್ರೆ ಹೇಳಿದ್ದಾರೆ.

Ad Widget

Leave a Comment

Your email address will not be published. Required fields are marked *