ಮುಗಿಯದ ಎರಡು ಜಡೆ ಕಚ್ಚಾಟ: ಮೈಸೂರು ಡಿಸಿ ಮತ್ತು ಸಿಇಒ ಎತ್ತಂಗಡಿ

. Ad Widget . Ad Widget . Ad Widget .

ಮೈಸೂರು: ಪರಸ್ಪರ ಕೆಸರೆರಚಾಟದ ಮೂಲಕ ರಾಜ್ಯದ ಗಮನ ಸೆಳೆದ ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಆ ಮೂಲಕ ಇಬ್ಬರ ನಡುವಿನ ಸಂಘರ್ಷವನ್ನು ಶಮನಗೊಳಿಸುವ ಪ್ರಯತ್ನ ಮಾಡಿದೆ. ಕಳೆದ ಕೆಲವು ದಿನಗಳಿಂದ ಸಂಘರ್ಷದಲ್ಲಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ಹಾಗೂ ಶಿಲ್ಪಾ ನಾಗ್ ಅವರನ್ನು ಆರ್​​ಡಿಪಿಆರ್ ನಿರ್ದೇಶಕರಾಗಿ ವರ್ಗಾವಣೆ ಮಾಡುವ ಮೂಲಕ ಸರ್ಕಾರ ಒಟ್ಟು ಆರು ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಇನ್ನು ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮೀಕಾಂತ್ ರೆಡ್ಡಿ ವರ್ಗಾವಣೆಗೊಂಡಿದ್ದಾರೆ.

Leave a Comment

Your email address will not be published. Required fields are marked *