ಉಡುಪಿ: 80ರ ದಶಕದಲ್ಲಿ ಭಾರತ ಫುಟ್ಬಾಲ್ ತಂಡವನ್ನೂ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದ ಶೇಖರ್ ಪದ್ದು ಬಂಗೇರ (75ವ.) ಇಂದು ಮೃತಪಟ್ಟಿದ್ದಾರೆ.
ಜಿಲ್ಲೆಯ ಬಡಾನಿಡಿಯೂರು ಮೂಲದವರಾದ ಅವರಿಗೆ ಕೆಲ ದಿನಗಳ ಹಿಂದೆ ಅವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಭಾರತ ತಂಡದಲ್ಲಿ ಗೋಲ್ಕೀಪರ್ ಹಾಗೂ ನಾಯಕನಾಗಿದ್ದ ಇವರು ದೇಶಕ್ಕೆ ಹಲವಾರು ಪಂದ್ಯಗಳನ್ನು ಗೆಲ್ಲಿಸಿ ಕೊಟ್ಟಿದ್ದಾರೆ. ಹಾಗೂ ಹಲವಾರು ಪ್ರತಿಷ್ಠಿತ ಫುಟ್ ಬಾಲ್ ಕ್ಲಬ್ ಗಳಲ್ಲಿ ತರಬೇತುದಾರನಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಸಾವಿನ ಸುದ್ದಿ ತಿಳಿದು ಫುಟ್ಬಾಲ್ ವಲಯ ಕಂಬನಿ ಮಿಡಿದಿದೆ.