ಪುತ್ತೂರು: ಊಟ ಮಾಡುತ್ತಿದ್ದಾಗ ಗಂಟಲಲ್ಲಿ ಆಹಾರ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಸಮೀಪದ ನಿಡ್ಪಳ್ಳಿ ಗ್ರಾಮದ ಕ್ಕುಕ್ಕುಪುಣಿ ಎಂಬಲ್ಲಿ ನಡೆದಿದೆ.
ಕುಕ್ಕುಪುಣಿ ನಿವಾಸಿ ಕೊರಗಪ್ಪ ನಲಿಕೆ ಎಂಬವರು ನಿನ್ನೆ ಮದ್ಯಾಹ್ನ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಆಹಾರದ ತುಡೊಂದು ಗಂಟಲಿನಲ್ಲಿ ಸಿಲುಕಿಕೊಂಡಿದೆ. ತಕ್ಷಣ ಮನೆಯವರು ಪ್ರಥಮ ಚಿಕಿತ್ಸೆ ನೀಡಿದರು ಫಲಕಾರಿಯಾಗಲಿಲ್ಲ. ಅವರಿಗೆ ಸ್ವಲ್ಪ ಸಮಯದಲ್ಲೇ ಉಸಿರಾಟದ ಸಮಸ್ಯೆ ಎದುರಾಗಿದೆ. ಬಳಿಕ ಮನೆಯವರು ಮುಡಿಪಿನಡ್ಕದ ಕ್ಲಿನಿಕ್ ಒಂದಕ್ಕೆ ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದ್ದಾರೆ. ಪುತ್ತೂರು ಆಸ್ಪತ್ರೆ ವೈದ್ಯರು ಪರೀಕ್ಷಿಸಿ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಅವರ ಪುತ್ರ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.






