June 2021

ಜೂ.21ರಿಂದ ವ್ಯಾಕ್ಸಿನೇಷನ್‌ ಹೊಸ ಅಭಿಯಾನ, ಪ್ರತಿಯೊಬ್ಬರಿಗೂ ಸಿಗುತ್ತೆ ಉಚಿತ ವ್ಯಾಕ್ಸಿನ್

ನವದೆಹಲಿ: ಜೂನ್ 7 ರಂದು ಪ್ರಧಾನಿ ಮೋದಿ ಘೋಷಿಸಿದಂತೆ, ಕೋವಿಡ್ -19 ವ್ಯಾಕ್ಸಿನೇಷನ್‌ನ ಹೊಸ ಅಭಿಯಾನ ಜೂನ್ 21 ರಿಂದ ಪ್ರಾರಂಭವಾಗಲಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆಗಳನ್ನು ನೀಡಲಾಗುವುದು. ವ್ಯಾಕ್ಸಿನೇಷನ್ ಡ್ರೈವ್‌ ನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೋವಿಡ್ -19 ಲಸಿಕೆಗಳನ್ನು ನೀಡಲಿದ್ದು, ಲಸಿಕೆ ನೀತಿಯಲ್ಲಿ ಗಮನಾರ್ಹ ಬದಲಾವಣೆ ತರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಘೋಷಿಸಿದಂತೆ, ರಾಜ್ಯಗಳು ಲಸಿಕೆ ಉತ್ಪಾದಕರಿಂದ ಲಸಿಕೆಗಳನ್ನು ಸಂಗ್ರಹಿಸಬೇಕಾಗಿಲ್ಲ. ಕೇಂದ್ರವು ಶೇಕಡ 75 ರಷ್ಟು ಲಸಿಕೆಗಳನ್ನು ಖರೀದಿಸಿ […]

ಜೂ.21ರಿಂದ ವ್ಯಾಕ್ಸಿನೇಷನ್‌ ಹೊಸ ಅಭಿಯಾನ, ಪ್ರತಿಯೊಬ್ಬರಿಗೂ ಸಿಗುತ್ತೆ ಉಚಿತ ವ್ಯಾಕ್ಸಿನ್ Read More »

ಮಾದಕ ಚೆಲುವೆಯ ಸೆಕ್ಸಿ ಶೋ | ಪಂದ್ಯವನ್ನೇ ಮರೆತ ಕ್ಯಾಮರಾಮ್ಯಾನ್ |ಹಾಡುಗಾರನಾದ ಕಮೆಂಟೇಟರ್

ಇತ್ತೆಚಿನ ದಿನಗಳಲ್ಲಿ ಪ್ರಮುಖ ಪಂದ್ಯಗಳ ವೇಳೆ ಕ್ರೀಡಾಂಗಣದಲ್ಲಿ ಸುಂದರಿಯರು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿಬಿಟ್ಟಿದೆ. ಫುಟ್ಬಾಲ್ ಪಂದ್ಯ, ಕ್ರಿಕೆಟ್ ಪಂದ್ಯಗಳ ವೇಳೆ ಕ್ಯಾಮರಾ ಮ್ಯಾನ್ ಕಣ್ಣಿಗೆ ಸುಂದರಿಯರು ಬಿದ್ದರೆ ಆದಿನ ಪಡ್ಡೆ ಹುಡುಗರಿಗೆ ಹಬ್ಬವಾಗುತ್ತದೆ. ಈ ಹಿಂದೆ ಹಲವಾರು ಸುಂದರಿಯರು ಕ್ರೀಡಾಂಗಣದ ಕ್ಯಾಮರಾ ಮ್ಯಾನ್ ಕಣ್ಣಿಗೆ ಬಿದ್ದು ಪಂದ್ಯ ನೋಡುತ್ತಿದ್ದ ಕ್ರೀಡಾಭಿಮಾನಿಗಳು ಪಂದ್ಯವನ್ನೇ ಮರೆಯುವಂತೆ ಮಾಡಿದ್ದಾರೆ. ಜೊತೆಗೆ ಸೆಲೆಬ್ರಿಟಿಗಳಾಗಿ ಮೆರೆದ್ದಾರೆ. ಐಪಿಎಲ್ ನ ಇತ್ತೀಚಿನ ಸೀಸನ್ ಗಳಲ್ಲಿ ಒಬ್ಬೊಬ್ಬ ಚೆಲುವೆಯರು ಕಾಣಿಸಿಕೊಂಡು ಯುವಕರ ಕ್ರಶ್ ಗಳಾಗಿದ್ದಾರೆ. ಅರೇಬಿಯನ್ ದೇಶದಲ್ಲಿ ನಡೆದ

ಮಾದಕ ಚೆಲುವೆಯ ಸೆಕ್ಸಿ ಶೋ | ಪಂದ್ಯವನ್ನೇ ಮರೆತ ಕ್ಯಾಮರಾಮ್ಯಾನ್ |ಹಾಡುಗಾರನಾದ ಕಮೆಂಟೇಟರ್ Read More »

ಪ್ರತಿಷ್ಠಿತ ಯುರೋಪಿಯನ್ ಪ್ರಶಸ್ತಿಗೆ ಭಾಜನರಾದ ಶೈಲಜಾ ಟೀಚರ್

ತಿರುವನಂತಪುರ: ಭಾರತಕ್ಕೆ ಕೋವಿಡ್ ಕಾಲಿಟ್ಟ ಆರಂಭದಲ್ಲಿ ಉತ್ತಮ ರೀತಿಯ ನಿರ್ವಹಣೆ ತೋರಿದ ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ಅವರಿಗೆ ಪ್ರತಿಷ್ಠಿತ ಸೆಂಟ್ರಲ್ ಯುರೋಪಿಯನ್ ಯೂನಿವರ್ಸಿಟಿ, ಓಪನ್ ಸೊಸೈಟಿ ಪ್ರಶಸ್ತಿ ನೀಡಿ ಗೌರವಿಸಲಿದೆ. ಸಾರ್ವಜನಿಕ ಆರೋಗ್ಯ ಸೇವೆಗಳ ಬದ್ಧತೆಯನ್ನು ಗುರುತಿಸಿ ಸಿಇಯು ಕೊಡಮಾಡುವ ಈ ಪ್ರಶಸ್ತಿಗೆ ಶೈಲಜಾ ಅರ್ಹವಾಗಿಯೇ ಭಾಜನರಾಗಿದ್ದಾರೆ. ಇತ್ತೀಚೆಗೆ ಆನ್‌ಲೈನ್‌ನಲ್ಲಿ ನಡೆದ 30 ನೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಮುಕ್ತ ಸಮಾಜದ ಆದರ್ಶಗಳನ್ನು ಪೂರೈಸುವ ಅಸಾಧಾರಣ ಭಿನ್ನತೆಯ ವ್ಯಕ್ತಿಗಳಿಗೆ ವರ್ಷಂಪ್ರತಿ ನೀಡಲಾಗುವ

ಪ್ರತಿಷ್ಠಿತ ಯುರೋಪಿಯನ್ ಪ್ರಶಸ್ತಿಗೆ ಭಾಜನರಾದ ಶೈಲಜಾ ಟೀಚರ್ Read More »

ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಸಾಮಾಜಿಕ ಜಾಲತಾಣಗಳಲ್ಲಿ ತೆಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಸೂಲಿಬೆಲೆ ಅವರು, ತನ್ನ ಫೇಸ್ಬುಕ್ ಪೇಜ್ ನಲ್ಲಿ, ‘ದುರದೃಷ್ಟವೇನು ಗೊತ್ತೇ ? ಮೋದಿಯನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ಸು ಆಕ್ಸಿಜೆನ್ ಜನರಿಗೆ ಸಿಗದಂತೆ ದಾಸ್ತಾನು ಮಾಡಿಕೊಂಡಿತು . ವ್ಯಾಕ್ಸಿನ್‌ಗಳನ್ನು ಜನರಿಗೆ ನೀಡದೇ ಕಸದಬುಟ್ಟಿಗೆಸೆಯಿತು. ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಬ್ಲಾಕ್ ಮಾಡಿಕೊಂಡು ಜನ ಸಾಯುವಂತೆ ನೋಡಿಕೊಂಡಿತು. ಕೊನೆಗೆ ಅಮಾಯಕರ ಸಾವನ್ನು ವೈಭವೀಕರಿಸಿ

ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು Read More »

ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು

ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು ಉಪ್ಪಿನಂಗಡಿ : ಇಲಿ ವಿಷ ತಿಂದು 2ವರ್ಷದ ಮಗು ಮೃತಪಟ್ಟಿರುವ ಘಟನೆ ನೆಲ್ಯಾಡಿಯ ಬಜತ್ತೂರಿನಲ್ಲಿ ನಡೆದಿದೆ. ಬಜತ್ತೂರಿನ ಕೆಮ್ಮಾರದ ನಿವೃತ್ತ ಸೈನಿಕ ಸೈಜು ಎಂಬವರು ಪುತ್ರಿ ಶ್ರೇಯಾ (2) ಮೃತಪಟ್ಟ ಮಗು. ಶ್ರೇಯಾ ತಂದೆ-ತಾಯಿ ಮನೆಯಲ್ಲಿ ಹಳೇ ವಸ್ತುಗಳನ್ನು ಕ್ಲೀನ್ ಮಾಡುತ್ತಿದ್ದರು. ಪಕ್ಕದಲ್ಲೇ ಇದ್ದ ಶ್ರೇಯಾ ಇಲಿ ವಿಷ ತೆಗೆದು ತಿಂದಿದ್ದಾಳೆ. ಇದು ಪೋಷಕರ ಗಮನಕ್ಕೆ ಬರುವುದು ಕೊಂಚ ತಡವಾಗಿದ್ದು, ಮಗು ವಿಷ ತಿಂದಿರುವುದನ್ನು ತಿಳಿದ ತಕ್ಷಣ

ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು Read More »

ಮಂಗಳಾದೇವಿ ದೇವಸ್ಥಾನದಲ್ಲಿ ಅದ್ದೂರಿ ಮದುವೆ | ಪ್ರಕರಣ ದಾಖಲು

ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿ ಮದುವೆ ಏರ್ಪಡಿಸಲಾಗಿತ್ತು. ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಸ್ವಲ್ಪಮಟ್ಟಿಗೆ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆಯಾದರೂ ಅದ್ದೂರಿ ಮದುವೆ ಇನ್ನಿತರ ಸಮಾರಂಭಗಳಿಗೆ ಅವಕಾಶವಿಲ್ಲ. ಮನೆಯಲ್ಲಿ ಮದುವೆಗೆ ಅವಕಾಶವಿದ್ದು ನಿಗದಿತ ಜನ ಸೇರಿಸಬಹುದಾಗಿದೆ. ದೇವಸ್ಥಾನದಲ್ಲಿ ನಡೆದ ಮದುವೆಯಲ್ಲಿ ನಿಯಮ ಮೀರಿ ಜನ ಸೇರಿಸಲಾಗಿದೆ. ಪಾಲಿಕೆಯ ನಾಮನಿರ್ದೇಶಿತ ಸದಸ್ಯರೊಬ್ಬರ ಮಗಳು ಸೇರಿದಂತೆ ಐದಾರು ಜೋಡಿ ಮದುವೆ ನಡೆಯುತ್ತಿತ್ತು. ಸುಮಾರು 40ಕ್ಕೂ ಹೆಚ್ಚು ವಾಹನಗಳಲ್ಲಿ

ಮಂಗಳಾದೇವಿ ದೇವಸ್ಥಾನದಲ್ಲಿ ಅದ್ದೂರಿ ಮದುವೆ | ಪ್ರಕರಣ ದಾಖಲು Read More »

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್

ಸುಬ್ರಹ್ಮಣ್ಯ: ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ನಿರ್ಬಂಧವಿದ್ದರೂ ಹೊರಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ಭಕ್ತರನ್ನು ಗುಂಡ್ಯ ಚೆಕ್’ಪೋಸ್ಟ್ ನಿಂದಲೇ ವಾಪಸ್ ಕಳುಹಿಸುವ ಕಾರ್ಯ ನಡೆಯುತ್ತಿದೆ. ಅಗತ್ಯ ದಾಖಲೆಗಳನ್ನು ಹೊಂದಿದವವರನ್ನು ಮಾತ್ರ ಜಿಲ್ಲೆಯ ಒಳಬರಲು ಬಿಡಲಾಗುತ್ತಿದೆ. ಶಿರಾಡಿ ಘಾಟ್ ಮೂಲಕ ಜಿಲ್ಲೆಯ ಧರ್ಮಸ್ಥಳ ಮತ್ತು ಸುಬ್ರಮಣ್ಯ ಪುಣ್ಯಕ್ಷೇತ್ರಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ನಿನ್ನೆ ಒಂದೇ ದಿನ ತೀರ್ಥಯಾತ್ರೆ ಆಗಮಿಸಿದ್ದ ಬರೋಬ್ಬರಿ 69 ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ. ಮುಂದಿನ ಎರಡು ವಾರಗಳ ಕಾಲ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳನ್ನು ಕರೆಯಲಾಗುವುದಿಲ್ಲ. ಅಂತರ್ ಜಿಲ್ಲಾ ಗಡಿಗಳಲ್ಲಿ

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್ Read More »

ಅಗತ್ಯ ವಸ್ತು ಖರೀದಿಗೆ ಮದ್ಯಾಹ್ನ 1 ರವರೆಗೆ ಅವಕಾಶ: ದಕ ಜಿಲ್ಲಾಧಿಕಾರಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಲಾಕ್‌ ಡೌನ್ ಜೂ.21 ರಿಂದ ಜೂ.28 ರವರೆಗೆ ಸೆಮಿ ಲಾಕ್‌ಡೌನ್ ಮಾದರಿಯಲ್ಲಿ ಮುಂದುವರಿಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಲಾಕ್‌ ಡೌನ್ ತೆರವು ಕುರಿತಂತೆ ರಾಜ್ಯ ಸರಕಾರ ಶನಿವಾರ ಹೊರಡಿಸಿದೆ ಆದೇಶದಂತೆ ಜೂ.11ರಂದು ಹೊರಡಿಸಿದ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಲಾಗಿದೆ. ಹಾಗಾಗಿ ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದೆ. ಆದಾಗ್ಯೂ

ಅಗತ್ಯ ವಸ್ತು ಖರೀದಿಗೆ ಮದ್ಯಾಹ್ನ 1 ರವರೆಗೆ ಅವಕಾಶ: ದಕ ಜಿಲ್ಲಾಧಿಕಾರಿ Read More »

ನಿಧಿಗಾಗಿ ದೇವಾಲಯದ ಗರ್ಭಗುಡಿಯನ್ನೇ ಅಗೆದರು | ಅರ್ಚಕ, ಜ್ಯೋತಿಷಿ, ಸರ್ಕಾರಿ ಉದ್ಯೋಗಿ ಸಹಿತ ಏಳು ಜನರ ಬಂಧನ

ಹಾಸನ: ನಿಧಿ ಸಿಗುತ್ತದೆ ಎಂಬ ಆಸೆಯಿಂದ ದೇವಾಲಯವನ್ನೇ ಅಗೆದ ಅರ್ಚಕ, ಜ್ಯೋತಿಷ್ಯ ಮತ್ತು ಸರ್ಕಾರಿ ನೌಕರ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಆಲೂರು ತಾಲ್ಲೂಕಿನ ದೈತಾಪುರ ಹೊರವಲಯದ ಪಾರ್ವತಮ್ಮನ ಬೆಟ್ಟದ ಮೇಲಿರುವ ಪುರಾತನ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಈ ಆರೋಪದ ಮೇಲೆ ಹಾಸನ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾರಾಯಣ, ಗಣಪತಿ ದೇವಾಲಯದ ಅರ್ಚಕ ತಿಪ್ಪೇಸ್ವಾಮಿ, ಜೋತಿಷಿ ಮಂಜುನಾಥ್, ಚನ್ನರಾಯಪಟ್ಟಣ ತಾಲ್ಲೂಕಿನ ಜಯರಾಮ, ಚೇತನ್, ಮಂಜುನಾಥ, ಹಾಸನ ತಾಲ್ಲೂಕಿನ ಶಂಕರನಹಳ್ಳಿ ಗ್ರಾಮದ

ನಿಧಿಗಾಗಿ ದೇವಾಲಯದ ಗರ್ಭಗುಡಿಯನ್ನೇ ಅಗೆದರು | ಅರ್ಚಕ, ಜ್ಯೋತಿಷಿ, ಸರ್ಕಾರಿ ಉದ್ಯೋಗಿ ಸಹಿತ ಏಳು ಜನರ ಬಂಧನ Read More »

ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ನಲ್ಲಿ’ವಿರಾಟ ದರ್ಶನ’, ಹೊಸ ದಾಖಲೆ ಬರೆದ ಕೊಹ್ಲಿ

ಇಂಗ್ಲೆಂಡ್: ಇಲ್ಲಿನ ಸೌತಾಂಪ್ಟನ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಮೊದಲ ದಿನದಾಟ ಮಳೆಯಿಂದ ನಡೆಯದೇ ಎರಡನೇ ದಿನ ಆರಂಭವಾಗಿದೆ. ಭಾರತ 146 ರನ್ ಗೆ 3 ವಿಕೆಟ್ ಕಳೆದುಕೊಂಡಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಜೇಯ 44 ರನ್ ಮತ್ತು ಅಜಿಂಕ್ಯಾ ರೆಹಾನೆ ಅಜೇಯ 29 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ನಲ್ಲಿ’ವಿರಾಟ ದರ್ಶನ’, ಹೊಸ ದಾಖಲೆ ಬರೆದ ಕೊಹ್ಲಿ Read More »