ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಲಿ – ಬಿಜೆಪಿಗೆ ಸಿದ್ದು ಸವಾಲ್

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ.

. Ad Widget . Ad Widget

ನಗರದಲ್ಲಿ‌ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಇತ್ತೀಚೆಗೆ ಕಾಂಗ್ರೆಸ್ ದಲಿತ ಸಿಎಂ ಅಭ್ಯರ್ಥಿಯನ್ನು ಘೋಷಿಸಲಿ ಎಂದು ಹೇಳಿದ್ದರು. ಇದೀಗ ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಬೀಳಲಿದೆ. ನಳಿನ್ ನಮಗೆ ಹೇಳುವ ಬದಲು ಅವರೇ ದಲಿತರನ್ನು ಸಿಎಂ ಮಾಡಲಿ ಎಂದು ಒತ್ತಾಯಿಸಿದರು.
ಬಿಜೆಪಿಯಲ್ಲಿ ಭ್ರಷ್ಟರೇ ತುಂಬಿದ್ದು, ಯಾರೇ ಮುಖ್ಯಮಂತ್ರಿಯಾದರೂ ಅವರ ಭ್ರಷ್ಟಾಚಾರ ನಿಲ್ಲದು ಎಂದ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯ ಎಂಬುದೇ ಇಲ್ಲ ಎಂದು ವ್ಯಂಗ್ಯವಾಡಿದರು.

. Ad Widget . . Ad Widget . Ad Widget

ಫೋನ್ ಕದ್ದಾಲಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಫೋನ್ ಕದ್ದಾಲಿಕೆ ಇದೇ ಮೊದಲಲ್ಲ, ಬಿಜೆಪಿ ಇದಕ್ಕೂ ಮೊದಲು ಮಾಡಿದೆ. 2019ರಲ್ಲಿ ನನ್ನ ಪಿ ಎ ವೆಂಕಟೇಶ್ ಫೋನ್ ಕದ್ದಾಲಿಕೆ ಮಾಡಿದ್ದಾರೆ.‌ ಕುಮಾರಸ್ವಾಮಿ, ಡಾ.ಜಿ.ಪರಮೇಶ್ವರ್ ಸೇರಿ ಹಲವರ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಸಮ್ಮಿಶ್ರ ಸರಕಾರ ಕಿತ್ತು ಹಾಕಲು ಏನು ಬೇಕೋ ಅದೆಲ್ಲಾ ಮಾಡಿದ್ದಾರೆ. ನಾನು ಈ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೂಲಕ ತನಿಖೆಗೆ ಆಗ್ರಹಿಸುತ್ತೇನೆ ಎಂದರು.

Leave a Comment

Your email address will not be published. Required fields are marked *