ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳ ಅಂದರ್

Ad Widget ... ..

ಬೆಂಗಳೂರು: ದ್ವಿಚಕ್ರ ವಾಹನ ಕದಿಯುತ್ತಿದ್ದ ಅಂತರರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿ ಐದು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಿಂದ ವರದಿಯಾಗಿದೆ.

Ad Widget

ತಮಿಳುನಾಡಿನ ಪೆನ್ನಪಲ್ಲಿ ಮೂಲದ ಕಿರಣ್ ಬಂಧಿತ ಆರೋಪಿ. ಈತನ ಗ್ಯಾಂಗ್‌ನ ಉಳಿದ ಇಬ್ಬರು ಆರೋಪಿಗಳಾದ ಸಂದೀಪ್ ಹಾಗೂ ರಾಜೇಶ್ ಪಾರಾರಿಯಾಗಿದ್ದು, ಆರೋಪಿಗಳಿಗಾಗಿ ಆನೇಕಲ್ ಪೋಲೀಸರು ಬಲೆ ಬೀಸಿದ್ದಾರೆ.

ಇವರು ಕಳ್ಳತನ ಮಾಡುತ್ತಿದ್ದ ಬೈಕ್ ಗಳನ್ನು ತಮಿಳುನಾಡಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗಿದೆ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಇನ್ನು ಬೈಕ್ ಕಳೆದುಕೊಂಡವರಿಗೆ ಮರಳಿ ತಲುಪಿಸಲು ಎಲ್ಲ ಸಿದ್ಧತೆಗಳನ್ನು ಪೋಲೀಸರು ಮಾಡಿಕೊಳ್ಳುತ್ತಿದ್ದಾರೆ.

Leave a Comment

Your email address will not be published. Required fields are marked *