ಸಚಿವ ಸಂಪುಟದಲ್ಲಿ ನಾನಿಲ್ಲ – ಶೆಟ್ಟರ್ ಅಚ್ಚರಿಯ ಹೇಳಿಕೆ

ಬೆಂಗಳೂರು. ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ನಾನು ಸೇರುವುದಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ

Ad Widget ... ..

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಪಕ್ಷದೊಳಗೆ ಕೆಲಸ ಮಾಡಲು ನಿರ್ಧರಿಸಿದ್ದು, ಯಾವುದೇ ಸಚಿವ ಸ್ಥಾನ ಆಕಾಂಕ್ಷಿಯಲ್ಲ.
ಪಕ್ಷದಲ್ಲಿ ನಾನು ತಳಮಟ್ಟದಲ್ಲಿ ಮೇಲಿನ ಮಟ್ಟದವರೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನಾನು ಯಾವುದೇ ಸ್ಥಾನಮಾನ ಅಪೇಕ್ಷಿಸುತ್ತಿಲ್ಲ. ನನ್ನ ಈ ನಿರ್ಧಾರ ವೈಯಕ್ತಿಕವಾಗಿದ್ದು, ಯಾರ ಒತ್ತಡವೂ ಇಲ್ಲ ಎಂದು ಅವರು ಹೇಳಿದರು.

Ad Widget

ಇತ್ತೀಚೆಗೆ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನಲಾದ ಆಡೀಯೋದಲ್ಲಿ ಶೆಟ್ಟರ್ ಅವರಿಗೆ ಸಚಿವ ಸ್ಥಾನ ಸಿಗುವುದಿಲ್ಲ ಎಂಬ ವಿವಾದದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.

Leave a Comment

Your email address will not be published. Required fields are marked *