ಗಂಡ ಹೆಂಡತಿ ಜಗಳ ಹೆಣ ಬೀಳುವ ತನಕ ಚಾರ್ಜರ್ ವಯರ್ ನಿಂದ ಕುತ್ತಿಗೆಗೆ ಬಿಗಿದು ಪತ್ನಿಯ ಕೊಲೆಗೈದ ಪಾಪಿ ಪತಿ

Ad Widget . Ad Widget . Ad Widget . Ad Widget . Ad Widget . Ad Widget .

ಕುಷ್ಟಗಿ : ಪತ್ನಿಯನ್ನು ಪತಿ ಮೋಬೈಲ್ ಚಾರ್ಜರ್ ವೈಯರ್ ನಿಂದ ಕುತ್ತಿಗೆಗೆ ಬಿಗಿದು, ಕಲ್ಲು ಎತ್ತಿ ಹಾಕಿ ಬೀಭತ್ಸವಾಗಿ ಕೊಂದು ಹಾಕಿರುವ ಘಟನೆ ಕುಷ್ಟಗಿಯಲ್ಲಿ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಂಜುಳಾ ಮಂಜುನಾಥ ಕಟ್ಟಿಮನಿ(25) ಮೃತ ನತದೃಷ್ಟೆ. ಸ್ಥಳೀಯ ತಾಲೂಕಾ ಸರ್ಕಾರಿ ಆಸ್ಪತ್ರೆಯ ಕೋವಿಡ್ ವಿಭಾಗದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಹೊರಗುತ್ತಿಗೆಯಲ್ಲಿ ಸೇವೆಯಲ್ಲಿದ್ದಳು.

ಯಲಬುರ್ಗಾ ತಾಲೂಕಿನ ಯಡ್ಡೋಣಿ ಗ್ರಾಮದ ಮಂಜುಳಾ ಈಕೆಯನ್ನು ಕೊಪ್ಪಳ ತಾಲೂಕಾ ಮುದ್ದಾಬಳ್ಳಿಯ ಮಂಜುನಾಥ ಕಟ್ಟಿಮನಿಯೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಪತಿ ಮಂಜುನಾಥ ಕಟ್ಟಿಮನಿ ಕುಷ್ಟಗಿಯ ಕೆನರಾ ಬ್ಯಾಂಕಿನಲ್ಲಿ ಅಟೆಂಡರ್ ಕೆಲಸದಲ್ಲಿದ್ದ ಬೇರೊಂದು ಯುವತಿಯೊಂದಿಗೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ.

ಇದರಿ ಪತಿ-ಪತ್ನಿ ನಡುವೆ ಆಗಾಗ್ಗೆ ಜಗಳಕ್ಕೆ ಉಂಟಾಗುತ್ತಿತ್ತು. ಗುರುವಾರ ರಾತ್ರಿ ಬೃಂದಾವನ ಹೋಟೆಲ್ ಗೆ ಕರೆದೊಯ್ದು ಇಬ್ಬರೂ ಜೊತೆಗೂಡಿ ಊಟ ಮಾಡಿದ್ದಾರೆ. ನಂತರ ಫೋಟೋವನ್ನು ಸಾಮಾಜಿಕ ಜಾಲತಾಣದ ಸ್ಟೇಟಸ್ ನಲ್ಲಿ ಹಂಚಿಕೊಂಡಿದ್ದಾರೆ. ನಂತರ ಇಬ್ಬರ ನಡುವೆ ಜಗಳವಾಗಿದ್ದು ಪತಿ ಮಂಜುನಾಥ ಪತ್ನಿ ಮಂಜುಳಾನ್ನು ಮೊಬೈಲ್ ಚಾರ್ಜರ್ ವೈಯರ್ ನಿಂದ ಕುತ್ತಿಗೆಗೆ ಬಿಗಿದು ತಲೆ ಮೇಲೆ ಕಲ್ಲು ಎತ್ತಿ ಅಮಾನುಷವಾಗಿ ಕೊಂದು ಹಾಕಿದ್ದಾನೆ. ನಂತರ ಕೊಪ್ಪಳ ರಸ್ತೆಯ ಕದಳೀ ನಗರ ಬಳಿ ಸಜ್ಜೆ ಹೊಲದಲ್ಲಿ ಎಸೆದು ಪರಾರಿಯಾಗಿದ್ದಾನೆ. ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *