ಆಂದ್ರಪ್ರದೇಶ: ಲಾರಿ ಮತ್ತು ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಮದುವೆಯಾದ 23ನೇ ದಿನಕ್ಕೆ ನವ ದಂಪತಿ ದುರಂತ ಸಾವು ಕಂಡ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಬಳಿ ಇಂದು ನಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸದ್ದಾಂ ಜಾತಗಾರ್(27),ಪತ್ನಿ ಸಲೀಮಾ(25),ಅತ್ತಿಗೆ ರೇಷ್ಮಾ(26) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಬಾಗಲಕೋಟೆ ಮುಧೋಳ ತಾಲೂಕಿನ ಮುಗಳಖೋಡ್ ಗ್ರಾಮದವರು ಎಂದು ತಿಳಿದು ಬಂದಿದೆ. ಮದುವೆಯಾದ ಹೊಸದರಲ್ಲಿ ಸಂಬಂಧಿಕರ ಊರಿಗೆ ಹೋದ ನವ ದಂಪತಿ ಸೇರಿ ಮಸಣ ಸೇರಿದ್ದಾರೆ.






