Ad Widget

ಆ. 16 ರಿಂದ ಕಾರವಾರದವರೆಗೂ ವಿಸ್ಟಾಡೋಮ್ ರೈಲು ವಿಸ್ತರಣೆ

Ad Widget . Ad Widget . Ad Widget . Ad Widget . Ad Widget . Ad Widget

ಉಡುಪಿ: ಬೆಂಗಳೂರಿನಿAದ ಕಾರವಾರಕ್ಕೆ ಬೆಳಗಿನ ರೈಲು, ಆ. 16 ರಿಂದ ಹೊಸ ವಿಸ್ಟಾಡೋಮ್ ಕೋಚಿನೊಂದಿಗೆ ಪುನರಾರಂಭಗೊಳ್ಳಲಿದೆ ಎಂದು ನೈರುತ್ಯ ರೈಲ್ವೇ ತಿಳಿಸಿದೆ.

Ad Widget . Ad Widget .

ಇದಕ್ಕೆ ಕೊಂಕಣ್ ರೈಲ್ವೇ ಒಪ್ಪಿಗೆ ಸೂಚಿಸಿದ್ದು ರೈಲ್ವೇ ಹಿತರಕ್ಷಣಾ ಸಮಿತಿ ಪ್ರಯಾಣಿಕರ ಒತ್ತಾಯ ಹೋರಾಟ ಫಲಪ್ರದವಾಗಿದೆ. ಕೋವಿಡ್ ಕಾರಣದಿಂದ ಬೆಂಗಳೂರು-ಕಾರವಾರ ಬೆಳಗಿನ ರೈಲು ಸಂಚಾರವನ್ನು ಮಂಗಳೂರಿನಿಂದ ಕಾರವಾರದ ತನಕ ರೈಲ್ವೆ ಇಲಾಖೆ ಸ್ಥಗಿತಗೊಳಿಸಿತ್ತು. ಈ ಸಂಬಂಧ ಆಯಾ ಭಾಗದ ಪ್ರಯಾಣಿಕರು, ಸಾರ್ವಜನಿಕರು ಸದರಿ ರೈಲನ್ನು ಪುನರಾರಂಭಿಸುವಂತೆ ಒತ್ತಾಯಿಸಿದ್ದರು.

ಅದೇ ಸಮಯದಲ್ಲಿ ವಿಸ್ಟಾಡೋಮ್ ಪ್ರವಾಸಿ ಬೋಗಿಯಿರುವ ರೈಲನ್ನು ಯಶವಂತಪುರದಿಂದ ಮಂಗಳೂರು ತನಕ ಓಡಿಸಲಾಗುತ್ತಿತ್ತು. ಇದರಿಂದ ಕುಂದಾಪುರ ಕಾರವಾರ ಭಾಗದ ಪ್ರಯಾಣಿಕರು ಹಾಗೂ ಪ್ರವಾಸಿಗರಿಗೆ ನಿರಾಸೆಯಾಗಿತ್ತು. ಈ ಸಂಬಂಧ ಕಾರವಾರದವರೆಗೂ ಈ ರೈಲನ್ನು ವಿಸ್ತರಿಸಬೇಕು ಎಂದು ಕುಂದಾಪುರ , ಉತ್ತರ ಕನ್ನಡ ರೈಲ್ವೇ ಪ್ರಯಾಣಿಕರ ಹಿತರಕ್ಷಣಾ ಸಮಿತಿ ರೈಲು ಪ್ರಯಾಣಿಕರು ಸಂಸದೆ, ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಮಾಡಿ ಒತ್ತಾಯಿಸಿದ್ದರು.
ಈ ನಿಟ್ಟಿನಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ಸಚಿವೆ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಕಾರವಾರ-ಬೆಂಗಳೂರು ಹಗಲು ರೈಲನ್ನು ಪುರಾರಾರಂಭಿಸುವಂತೆ ಮನವಿ ಮಾಡಿದರು. ಸಚಿವರ ಮನವಿಯನ್ನು ಪುರಸ್ಕರಿಸಿದ ರೈಲ್ವೆ ಇಲಾಖೆ ಕಾರವಾರ-ಬೆಂಗಳೂರು ಬೆಳಗಿನ ರೈಲನ್ನು ಪುನರಾರಂಭಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿತ್ತು.

ನೈರುತ್ವ ರೈಲ್ವೆ ಬೆಂಗಳೂರು-ಕಾರವಾರ ರೈಲನ್ನು 16 ರಿಂದ ಪುನರಾರಂಭಿಸುತ್ತಿದೆ ಹಾಗು ಒಂದು ಹೊಸ ವಿಸ್ಟಾಡೋಮ್ ಕೋಚ್ ಕೂಡ ಈ ರೈಲಿಗೆ ಜೊತೆಗೊಳ್ಳಲಿದೆ. ಇನ್ನು ಮುಂದೆ ಪ್ರಕೃತಿ ರಮಣೀಯ ಪಶ್ಚಿಮ ಘಟ್ಟಗಳ ಹಾಗು ನಮ್ಮ ಕರಾವಳಿಯ ಅರಬೀ ಸಮುದ್ರದ ವಿಹಂಗಮ ನೋಟಗಳನ್ನು ರೈಲ್ವೆ ಪ್ರಯಾಣದ ನಡುವೆಯೇ ಕಣ್ತುಂಬಿಕೊಳ್ಳಬಹುದಾಗಿದೆ.

Leave a Comment

Your email address will not be published. Required fields are marked *