August 2021

ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ಹೆಜ್ಜೆ ಶುಭಕೋರುವ ಬೋರ್ಡಿಂಗ್ಸ್ ಫ್ಲೆಕ್ಸ್ ಗೆ ಬ್ರೇಕ್

ಉಡುಪಿ: ಕೆಲವು ದಿನಗಳ ಹಿಂದೆ ಸರಕಾರಿ ಸಮಾರಂಭಗಳಲ್ಲಿ ಹೂ ಗುಚ್ಛ, ಹಾರ, ಇತರ ನೆನಪಿನ ಕಾಣಿಕೆ ನೀಡುವುದನ್ನು ನಿಷೇಧಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇಶುಭಕೋರುವಂತಹ ವರ್ಡಿಂಗ್ಸ್ ಫ್ಲೆಕ್ಸ್ ಗಳನ್ನು ಹಾಕುವುದನ್ನು ನಿಲ್ಲಿಸಬೇಕು ಎಂದರು. ಜೊತೆಗೆ ಫ್ಲೆಕ್ಸ್ ಗಳನ್ನು ಹಾಕದಂತೆ ಪಕ್ಷ ಮತ್ತು ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡರು.ಸರಕಾರಿ ಸಮಾರಂಭಗಳಲ್ಲಿ ಹೂವಿನ ಬಳಕೆ ನಿಷೇಧ ಮಾಡಿರುವುದನ್ನು ವಿರೋಧಿಸಿ ಹೂವಿನ ವ್ಯಾಪ್ಯಾರಿಗಳು ಕೈಗೊಂಡಿದ್ದ ಪ್ರತಿಭಟನೆ […]

ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ಹೆಜ್ಜೆ ಶುಭಕೋರುವ ಬೋರ್ಡಿಂಗ್ಸ್ ಫ್ಲೆಕ್ಸ್ ಗೆ ಬ್ರೇಕ್ Read More »

‘ನಿಮಗೇನು ಕಾಮನ್ ಸೆನ್ಸ್ ಇಲ್ವಾ?’ ದ.ಕ ಡಿಸಿ ಗೆ ಸಿಎಂ ಹಿಗ್ಗಾಮುಗ್ಗಾ ತರಾಟೆ

ಮಂಗಳೂರು: ಮಾಸ್ಕ್, ಗ್ಲೌಸ್ ಇಲ್ಲದೇ ಏನ್ ಆಡಳಿತ ಮಾಡ್ತೀರಾ?ಆರೋಗ್ಯ ಸಿಬ್ಬಂದಿಗೆ ಬೇಕಾದ ಸವಲತ್ತು ಕೊಡೋಕೆ ನಿಮ್ಮಿಂದ ಆಗಲ್ವಾ? ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡ ಘಟನೆ ಗುರುವಾರ ನಡೆಯಿತು. ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಶಾ ಕಾರ್ಯಕರ್ತರು ಸೇರಿದಂತೆ ಅರೋಗ್ಯ ಕಾರ್ಯಕರ್ತರಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಗ್ಲೌಸ್ ಕೊರತೆ ಇದೆ ಎಂದು ಶಾಸಕ ಯು.ಟಿ. ಖಾದರ್ ಆಕ್ಷೇಪಿಸಿದರು.ಇದಕ್ಕೆ ಪ್ರತಿಕ್ರಿಯೆ ನೀಡಿದ

‘ನಿಮಗೇನು ಕಾಮನ್ ಸೆನ್ಸ್ ಇಲ್ವಾ?’ ದ.ಕ ಡಿಸಿ ಗೆ ಸಿಎಂ ಹಿಗ್ಗಾಮುಗ್ಗಾ ತರಾಟೆ Read More »

ಬಂಟ್ವಾಳ : ಸ್ಕೂಟರ್ ಲಾರಿ ಅಪಘಾತ – ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ: ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪದ ಬೊಳ್ಳುಕಲ್ಲು ಸಮೀಪ ಇಂದು ಸಂಭವಿಸಿದೆ. ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಡ ಎಂಬವರ ಪುತ್ರ ಗಣೇಶ್ ಬಂಗೇರ (54) ಮೃತ ಸ್ಕೂಟರ್ ಸವಾರ. ಈತ ತನ್ನ ದ್ವಿಚಕ್ರ ವಾಹನದಲ್ಲಿ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ವೇಳೆ ಬುಡೋಳಿ ಸಮೀಪ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ

ಬಂಟ್ವಾಳ : ಸ್ಕೂಟರ್ ಲಾರಿ ಅಪಘಾತ – ಸವಾರ ಸ್ಥಳದಲ್ಲೇ ಸಾವು Read More »

ಉಡುಪಿ : ಆನ್ ಲೈನ್ ನಲ್ಲಿ ಲೋನ್ ಪಡೆಯಲು ಹೋಗಿ ಲಕ್ಷಾಂತರ ರೂ. ಪಂಗನಾಮ

ನಿಮಗೂ ಬರಬಹುದು ಈ ಆಫರ್ ಉಡುಪಿ: ಯುವಕನೋರ್ವ ಆನ್ ಲೈನ್ ಮೂಲಕ ಲೋನ್ ಪಡೆಯಲು ಹೋಗಿ 2 ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಮುಂಡ್ಕೂರಿನ ಸಿರಾಜ್ (26) ವಂಚನೆಗೊಳಗಾದವರು. ಇವರು ಆನ್ ಲೈನ್ ನಲ್ಲಿ ಸಾಲ ಪಡೆಯುವ ಬಗ್ಗೆ ಆನ್ ಲೈನ್ ವೆಬ್ ಸೈಟ್ ಒಂದರಲ್ಲಿ ಅರ್ಜಿ ಸಲ್ಲಿಸಿದ್ದು, ಈ ಸಂದರ್ಭ ಹೆಸರು ಮೊಬೈಲ್ ಸಂಖ್ಯೆ ಗಳನ್ನು ಅಪ್ಲೋಡ್ ಮಾಡಿದ್ದರು. ಮೂರು ದಿನಗಳ ನಂತರ (+918343839550) ಅಪರಿಚಿತ ನಂಬರ್ ನಿಂದ ಯುವಕನಿಗೆ

ಉಡುಪಿ : ಆನ್ ಲೈನ್ ನಲ್ಲಿ ಲೋನ್ ಪಡೆಯಲು ಹೋಗಿ ಲಕ್ಷಾಂತರ ರೂ. ಪಂಗನಾಮ Read More »

ಗುರಿ ತಲುಪಲಿಲ್ಲ ಇಮೇಜಿಂಗ್: ಭಾರೀ ನಿರಾಸೆ

ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಬೆಳಗ್ಗೆ ಉಡಾವಣೆ ಮಾಡಲಾಗಿದ್ದ ಅತ್ಯಾಧುನಿಕ ಜಿಯೋ – ಇಮೇಜಿಂಗ್ ಉಪಗ್ರಹ ಇಒಎಸ್ -03 ಉಪಗ್ರಹ ಗುರಿ ತಲುಪುವಲ್ಲಿ ವಿಫಲವಾಗಿದೆ. ಬೆಳಗ್ಗೆ 5.43 ಕ್ಕೆ ಉಪಗ್ರಹವನ್ನು ಹೊತ್ತ ಜಿಎಸ್‌ಎಲ್ವಿ -ಎಫ್ 10 ರಾಕೆಟ್ ನಭಕ್ಕೆ ಜಿಗಿದಿದ್ದು, ಮೊದಲ ಮತ್ತು ಎರಡನೇ ಹಂತಗಳ ಕಾರ್ಯಕ್ಷಮತೆ ಸಾಮಾನ್ಯವಾಗಿತ್ತು. ಆದರೆ, ನಂತರದಲ್ಲಿ ಗುರಿ ತಲುಪುವಲ್ಲಿ ಉಪಗ್ರಹ ವಿಫಲವಾಗಿದೆ. 2020 ರ ಮಾರ್ಚ್ ನಲ್ಲಿ ಈ ಉಪಗ್ರಹ ಉಡಾವಣೆ ಆಗಬೇಕಿತ್ತು. ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ

ಗುರಿ ತಲುಪಲಿಲ್ಲ ಇಮೇಜಿಂಗ್: ಭಾರೀ ನಿರಾಸೆ Read More »

ಶಾಸಕ ಸತೀಶ ರೆಡ್ಡಿ‌ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಬೆಂಗಳೂರು : ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ಸತೀಶ್ ರೆಡ್ಡಿ ಅವರ ನಿವಾಸದ ಬಳಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರಿಗೆ ತಡರಾತ್ರಿ 1.30ಕ್ಕೆ ನಾಲ್ವರು ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಅವರು ಭೇಟಿ ನೀಡಿದ್ದಾರೆ.

ಶಾಸಕ ಸತೀಶ ರೆಡ್ಡಿ‌ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು Read More »

ಸೌದಿ ಅರೇಬಿಯಾದಿಂದ ಬಂದ ಯುವಕನಿಗೆ ಕ್ವಾರಂಟೈನ್ ನಲ್ಲಿ‌ ಅನ್ನ, ನೀರಿಲ್ಲ

ಮಂಗಳೂರು: ಸೌದಿ ಅರೇಬಿಯಾದಿಂದ ಮುಂಬೈಗೆ ಬಂದಿದ್ದ ಯುವಕನಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಇದ್ದರೂ ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸೇರಿ ಕ್ವಾರಂಟೈನ್ ಕೇಂದ್ರಕ್ಕೆ ತಳ್ಳಿದ್ದು, ಎರಡು ದಿನಗಳಿಂದ ಅನ್ನ ನೀರಿಲ್ಲದೆ ಪರದಾಡಿದ ಅಮಾನವೀಯ ಘಟನೆ ನಡೆದಿದೆ. ಎರಡು ಡೋಸೇಜ್ ಕೊರೊನಾ ಲಸಿಕೆ ನೀಡಿರುವ ಪ್ರಮಾಣಪತ್ರ, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಇದ್ದರೂ, ಕ್ವಾರಂಟೈನ್ ಆಗಲೇಬೇಕೆಂದು ಹೊಟೇಲ್ ಕೊಠಡಿಯಲ್ಲಿ ಯುವಕನನ್ನು ಕೂಡಿಹಾಕಲಾಗಿತ್ತು. ಇದರಿಂದಾಗಿ ಎರಡು ದಿನಗಳಿಂದ ಅನ್ನ, ನೀರಿಲ್ಲದೆ ಬವಣೆ ಪಟ್ಟಿದ್ದ ಯುವಕ ಕೊನೆಗೂ ಅಲ್ಲಿಂದ ಮಂಗಳೂರು

ಸೌದಿ ಅರೇಬಿಯಾದಿಂದ ಬಂದ ಯುವಕನಿಗೆ ಕ್ವಾರಂಟೈನ್ ನಲ್ಲಿ‌ ಅನ್ನ, ನೀರಿಲ್ಲ Read More »

ಹನಿನೀರಾವರಿ ಉತ್ತೇಜನಕ್ಕೆ ರಾಜ್ಯಕ್ಕೆ 300 ಕೋಟಿ ರೂ. ಅನುದಾನ ಮಂಜೂರು – ಶೋಭಾ ಕರಂದ್ಲಾಜೆ

ನವದೆಹಲಿ: ರಾಜ್ಯದ ರೈತರು ಹನಿ ನೀರಾವರಿಯಲ್ಲಿ ತೊಡಗಿಸಿಕೊಳ್ಳುವಂತೆ ಉತ್ತೇಜನ ನೀಡಲು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ 300 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಆ.11ರಂದು ಬಿಡುಗಡೆಗೊಳಿಸಿದ ಪತ್ರಿಕಾ ಹೇಳಿಕೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಶೋಭಾ ಕರಂದ್ಲಾಜೆ, ಈ 300 ಕೋಟಿ ಅನುದಾನದಲ್ಲಿ 21 ಕೋಟಿ ಅನುದಾನವನ್ನು ಬುಡಕಟ್ಟು ಪ್ರದೇಶದ ಉಪ ಯೋಜನೆ, 51

ಹನಿನೀರಾವರಿ ಉತ್ತೇಜನಕ್ಕೆ ರಾಜ್ಯಕ್ಕೆ 300 ಕೋಟಿ ರೂ. ಅನುದಾನ ಮಂಜೂರು – ಶೋಭಾ ಕರಂದ್ಲಾಜೆ Read More »

‘ಹೊಡೆದಾಟಕ್ಕೆ ರೆಡಿ ಅಂದ್ರೆ ಅದರರ್ಥ ಏನು ಈಶ್ವರಪ್ಪನವ್ರೇ?’ – ಬೇಳೂರು ಕಿಡಿ

ಶಿವಮೊಗ್ಗ : ಜನರ ಆಚಾರ -ವಿಚಾರ ಬಗ್ಗೆ ಮಾತನಾಡುವ ಈಶ್ವರಪ್ಪನವರು ನಾವು ಹೊಡೆದಾಟಕ್ಕೆ ರೆಡಿ ಇದ್ದೇವೆ ಅಂದ್ರೆ ನೀವು ಜನರಿಗೆ ಏನು ಸಂದೇಶ ಕೊಡ್ತೀರಾ ? ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರು ಈಶ್ವರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ತತ್ವ, ಸಿದ್ದಾಂತ, ಭಾರತ ಮಾತೆ ಎಂದು ಬಿಜೆಪಿಯ ಬಗ್ಗೆ ಈಶ್ವರಪ್ಪ ಮಾತನಾಡುತ್ತಾರೆ. ಅದರ ಜೊತೆಗೆ ಈ ರೀತಿಯ ಮಾತುಗಳನ್ನು ಆಡುತ್ತಾರೆ. ಗೌರವ ಇರುವ ಹಿರಿಯ ನಾಯಕರು ಹೀಗೆ ಮಾತನಾಡಬಾರದು. ಇದು

‘ಹೊಡೆದಾಟಕ್ಕೆ ರೆಡಿ ಅಂದ್ರೆ ಅದರರ್ಥ ಏನು ಈಶ್ವರಪ್ಪನವ್ರೇ?’ – ಬೇಳೂರು ಕಿಡಿ Read More »

ಇಸ್ರೋದಿಂದ‌ ಮತ್ತೊಂದು ಮೈಲಿಗಲ್ಲು| ನಭಕ್ಕೆ ಚಿಮ್ಮಿದ ಇಮೇಜಿಂಗ್

ನವದೆಹಲಿ: ಇಸ್ರೋದ ಮತ್ತೊಂದು ಉಪಗ್ರಹ ಇಂದು ಬೆಳಗ್ಗಿನ ಜಾವ 5;43ಕ್ಕೆ ಶ್ರೀಹರಿಕೋಟದ ಸತೀಶ್ ಧವನ್ ಕೇಂದ್ರದಿಂದ ಉಡಾವಣೆಯಾಗಿದೆ. ಕಳೆದ ಫೆಬ್ರವರಿ 28 ರಂದು, ಇಸ್ರೋ 18 ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡಿತ್ತು. ಅದರಲ್ಲಿ ಪ್ರಾಥಮಿಕ ಬ್ರೆಜಿಲ್‌ನ ಅಮೆಜೋನಿಯಾ-1 ಉಪಗ್ರಹ ಮತ್ತು ಕೆಲವು ದೇಸೀ ಉಪಗ್ರಹಗಳನ್ನು ಹೊಂದಿದ್ದು, ಇಂದು ಇದರ ಉಡಾವಣೆಯಾಗಿದೆ. ಇದು ಪ್ರಕೃತಿ ವಿಕೋಪಗಳು ಮತ್ತು ಮೋಡ ಸ್ಫೋಟಗಳು ಅಥವಾ ಗುಡುಗು ಸಹಿತ ಹವಾಮಾನ ಘಟನೆಗಳನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತದೆ. ಜಿಎಸ್‌ಎಲ್‌ವಿ-ಎಫ್ 10 ಮಿಷನ್ ಭೌಗೋಳಿಕ

ಇಸ್ರೋದಿಂದ‌ ಮತ್ತೊಂದು ಮೈಲಿಗಲ್ಲು| ನಭಕ್ಕೆ ಚಿಮ್ಮಿದ ಇಮೇಜಿಂಗ್ Read More »