ಪುತ್ತೂರು: ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಅ.10 ರಂದು ಬೆಳಗ್ಗೆ ನಡೆದಿದೆ.
ಮೃತಪಟ್ಟವರನ್ನು ಗೋಲ್ಡನ್ ಬೇಕರಿಯ ಮಾಲೀಕ ಅಝೀಝ್ ಎಂದು ಗುರುತಿಸಲಾಗಿದೆ. ಅವರು ಭಾನುವಾರ ಬೆಳಗ್ಗೆ ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ.
ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






