ಉಡುಪಿ :ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಹೋಗುತ್ತಿದ್ದ ಯುವಜೋಡಿಯೊಂದು ಮೈಮರೆತು ಸರಸ ಸಲ್ಲಾಪದಲ್ಲಿ ತೊಡಗಿದ ಘಟನೆ ನಡೆದಿದೆ.
ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿಯನ್ನು ಉಡುಪಿಯಲ್ಲಿ ಸಾರ್ವಜನಿಕರು ಹಿಡಿದು ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗುತ್ತಿದೆ. ಇಂದು ಬೆಳಗ್ಗೆ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಬಸ್ಸಿನಲ್ಲಿ ಸರಸದಲ್ಲಿ ತೊಡಗಿದ್ದ ವೇಳೆ ಸಾರ್ವಜನಿಕರು ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದು ಉಡುಪಿಯಲ್ಲಿ ಇಬ್ಬರನ್ನೂ ವಿಚಾರಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿತ್ತು.

















