ಮಂಗಳೂರು: ಮಂಗಳೂರಿನಲ್ಲಿ ಮೀನುಗಾರನೋರ್ವನನ್ನು ಉಲ್ಟಾ ನೇತು ಹಾಕಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ
ಮಂಗಳೂರಿನ ಧಕ್ಕೆಯಲ್ಲಿ ಈ ಘಟನೆ ನಡೆದಿದ್ದು ಮೊಬೈಲ್ ಕದ್ದಿದ್ದಾನೆ ಎಂಬ ಆರೋಪ ಮಾಡಿ ಆಂದ್ರಪ್ರದೇಶದ ಮೂಲದ ವೈಲ ಶೀನು (34) ಎಂಬಾತನಿಗೆ ಹಲ್ಲೆ ಮಾಡಲಾಗಿದೆ.

ವೈಲ ಶೀನು ಎಂಬಾತನ ಕಾಲಿಗೆ ಹಗ್ಗದಿಂದ ಕಟ್ಟಿ ಆತನನ್ನು ತಲೆಕೆಳಗು ಮಾಡಿ ನೇತು ಹಾಕಿ ಹಲ್ಲೆ ನಡೆಸಲಾಗಿದೆ. ಈ ವಿಡಿಯೋ ಪೊಲೀಸರ ಕೈಗೆ ಸಿಕ್ಕಿದ್ದು ಇವರೆಲ್ಲರೂ ಆಂಧ್ರಪ್ರದೇಶದ ಮೀನುಗಾರರು ಎಂದು ತಿಳಿದುಬಂದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.