ವಿಪಕ್ಷಗಳ ಗದ್ದಲದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

Ad Widget ... ..

ಬೆಳಗಾವಿ: ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ ದೊರೆತಿದೆ.

Ad Widget

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ನ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಅಂಗೀಕಾರ ಸಿಕ್ಕಿದೆ. ಇಂದು ಸದನದಲ್ಲಿ ಸ್ಪೀಕರ್‌ ಕಾಗೇರಿ ಮಂತಾತರ ನಿಷೇಧ ಮಸೂದೆಯನ್ನು ದ್ವನಿ ಮತಕ್ಕೆ ಹಾಕಿದರು. ಈ ವೇಳೆ ವಿಧಾನಸಭಾ ಹೆಚ್ಚಿನ ಸದಸ್ಯರು ಮಸೂದೆ ಪರ ಮತ ಹಾಕಿದ್ದು, ಈಗ ಅಂಗೀಕಾರಗೊಂಡಿದೆ.

ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಮಂತಾತರ ಕಾಯ್ದೆ ಮಂಡಿಸಿದರು. ಬಳಿಕ ಒಂದಿಡೀ ದಿನ ಕಾಯ್ದೆ ಪರ-ವಿರೋಧ ಚರ್ಚೆ ನಡೆಸಲಾಯ್ತು. ಈಗ ಕೊನೆಗೂ ಧ್ವನಿ ಮತಕ್ಕೆ ಹಾಕಿ ಸರ್ಕಾರ ಒಪ್ಪಿಗೆ ಪಡೆದುಕೊಂಡಿದೆ.

Leave a Comment

Your email address will not be published. Required fields are marked *