December 2021

ಕುಕ್ಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ವಿಶೇಷ ಪೂಜೆ

ಸುಬ್ರಹ್ಮಣ್ಯ: ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅಬ್ದುಲ್‌ ನಝೀರ್‌ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭಾನುವಾರ ರಾತ್ರಿ ಆಗಮಿಸಿ ವಾಸ್ತವ್ಯ ಹೂಡಿದರು. ಸೋಮವಾರ ಬೆಳಗ್ಗೆ ಶ್ರೀ ದೇವಳಕ್ಕೆ ಆಗಮಿಸಿದ ಅವರು, ಶ್ರೀ ದೇವರ ದರುಶನ ಪಡೆದರು. ಬಳಿಕ ಪವಿತ್ರ ಸೇವೆಗಳಲ್ಲಿ ಒಂದಾದ ಆಶ್ಲೇಷ ಬಲಿ ಪೂಜೆಯನ್ನು ನೆರವೇರಿಸಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ಸೋಮವಾರ ಸುಬ್ರಹ್ಮಣ್ಯದಲ್ಲೇ ವಾಸ್ತವ್ಯವಾಗಿರುವ ನ್ಯಾಯಧೀಶರು ಇಂದು ಇಲ್ಲಿಂದ ನಿರ್ಗಮಿಸಲಿದ್ದು, ಬಳಿಕ ಜಿಲ್ಲೆಯ ವಿವಿಧೆಡೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. […]

ಕುಕ್ಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ವಿಶೇಷ ಪೂಜೆ Read More »

ನೈಟ್ ಕರ್ಪ್ಯೂ: ಯಕ್ಷಗಾನ, ಕಂಬಳ ಸೇರಿದಂತೆ ರಾತ್ರಿ 10ರಿಂದ ಎಲ್ಲವೂ ಬಂದ್ – ದ.ಕ ಡಿಸಿ ಆದೇಶ

ಮಂಗಳೂರು: ಓಮಿಕ್ರಾನ್ ಆತಂಕದ ಹಿನ್ನಲೆ ನಾಳೆಯಿಂದ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿಗೊಳಿಸಿರುವ ರಾಜ್ಯ ಸರಕಾರದ ಆದೇಶ ಕರಾವಳಿಯಲ್ಲಿ ನಡೆಯುವ ಯಕ್ಷಗಾನ ಹಾಗೂ ಕಂಬಳಕ್ಕೂ ಅನ್ವಯಿಸಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ನೈಟ್‌ ಕರ್ಫ್ಯೂ ವಿಚಾರದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುವುದು. ಕಂಬಳ, ಯಕ್ಷಗಾನ ಸೇರಿದಂತೆ ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯೊಳಗೆ ಮುಗಿಸಬೇಕು, ಇದರಲ್ಲಿ ಯಾವುದೇ ರಿಯಾಯಿತಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸ್ಪಷ್ಟಪಡಿಸಿದ್ದಾರೆ. ರಾತ್ರಿ ವೇಳೆ ನಡೆಯುವಂತಹ ಯಕ್ಷಗಾನ, ಕಂಬಳಗಳನ್ನು

ನೈಟ್ ಕರ್ಪ್ಯೂ: ಯಕ್ಷಗಾನ, ಕಂಬಳ ಸೇರಿದಂತೆ ರಾತ್ರಿ 10ರಿಂದ ಎಲ್ಲವೂ ಬಂದ್ – ದ.ಕ ಡಿಸಿ ಆದೇಶ Read More »

ಬಿಸಿಯೂಟ ಸೇವಿಸಿದ 89 ಮಕ್ಕಳು ಅಸ್ವಸ್ಥ

ಹಾವೇರಿ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥರಾಗಿ 89 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದಲ್ಲಿ ನಡೆದಿದೆ. ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದವು. ಊಟ ಸೇವಿಸಿದ ನಂತರ 89ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಬೇಧಿ ಕಾಣಿಸಿಕೊಂಡು, ಅಸ್ವಸ್ಥಗೊಂಡಿದ್ದಾರೆ. ವಿಷಯ ತಿಳಿದು ಸ್ಥಳೀಯ ಗ್ರಾಮಸ್ಥರು ಸೇರಿದಂತೆ ಶಾಲಾ ಶಿಕ್ಷಕರು ಮಕ್ಕಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ತಾಲೂಕು ಆಸ್ಪತ್ರೆಗೆ ಡಿಡಿಪಿಐ ಅಂದಾನಪ್ಪ

ಬಿಸಿಯೂಟ ಸೇವಿಸಿದ 89 ಮಕ್ಕಳು ಅಸ್ವಸ್ಥ Read More »

ಕೋಮುಭಾವನೆ ಕೆರಳಿಸುವ ಫೋಸ್ಟ್ ಹಾಕಿದ್ದ ಸಂಬರಗಿ ವಿರುದ್ದ ಎಪ್ಐಆರ್

ಬೆಂಗಳೂರು: ಕೋಮುಭಾವನೆ ಕೆರಳಿಸುವಂತೆ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದಂತ ಪ್ರಶಾಂತ್ ಸಂಬರಗಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿಯವರು ಡಿಕೆ ಶಿವಕುಮಾರ್ ಉರೂಪ್ ಡಿಕೆಎಸ್ ದೊಡ್ಡ ದೊಡ್ಡ ಬಂಡೆಗಳನ್ನೇ ಒಡೆದು ಹಾಕಿದವನಿಗೆ ಮತಾಂತರ ಕಾಯ್ದೆ ಹರಿಯೋದು ಕಷ್ಟವೇನಲ್ಲ ಬಿಡಿ ಎಂಬುದಾಗಿ ಕೋಮುಭಾವನೆ ಕೆರಳಿಸುವಂತ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು. ಈ ಪ್ರಶಾಂತ ಸಂಬರಗಿಯವರ ಪೋಸ್ಟ್ ಗೆ ಅನೇಕರು ಆಕ್ಷೇಪ ಕೂಡ ವ್ಯಕ್ತ ಪಡಿಸಿದ್ದರು. ಈ ಪೋಸ್ಟ್ ಬಗ್ಗೆ ಇದೀಗ ಆಕ್ಷೇಪಿಸಿ ಹಾಗೂ

ಕೋಮುಭಾವನೆ ಕೆರಳಿಸುವ ಫೋಸ್ಟ್ ಹಾಕಿದ್ದ ಸಂಬರಗಿ ವಿರುದ್ದ ಎಪ್ಐಆರ್ Read More »

ಸುಳ್ಯ: ಅಪರಿಚಿತ ಗಂಡಸಿನ ಶವ ಪತ್ತೆ

ಸುಳ್ಯ: ಇಲ್ಲಿನ ಪೈಚಾರು-ಸೋಣಂಗೇರಿ‌ ರಸ್ತೆಯ ಹೊಸಗದ್ದೆ ಎಂಬಲ್ಲಿ ಅಪರಿಚಿತ ಗಂಡಸಿನ ಕೊಳೆತ ಶವ ಮತ್ತೆಯಾಗಿದೆ. ರಸ್ತೆ ಬದಿಯಲ್ಲಿ ‌ಹೆಲ್ಮೆಟ್ ವ್ಯಾಪಾರ ನಡೆಸುತ್ತಿದ್ದ ವ್ಯಕ್ತಿಯೋರ್ವರಿಗೆ ಇಂದು ಮುಂಜಾನೆ ಕೊಳೆತ ವಾಸನೆ ಬರುತ್ತಿದ್ದು, ಪರಿಶೀಲನೆ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಳ್ಯ‌ ಪೊಲೀಸರು ಭೇಟಿ ನೀಡಿ‌ ಪರಿಶೀಲಿಸಿದ್ದಾರೆ.

ಸುಳ್ಯ: ಅಪರಿಚಿತ ಗಂಡಸಿನ ಶವ ಪತ್ತೆ Read More »

ಮಂಗಳೂರು: ರೈಲು ಪ್ರಯಾಣಿಕರ ಬ್ಯಾಗಿಗೆ‌ ಕನ್ನ ಹಾಕುತ್ತಿದ್ದ ಖದೀಮ| ಸುಳ್ಯ ಮೂಲದ‌ ವ್ಯಕ್ತಿಯ ಬಂಧಿಸಿದ ಪೊಲೀಸರು|

ಸುಳ್ಯ: ರೈಲು ಪ್ರಯಾಣಿಕರ ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಂಗಳೂರು – ಬೆಂಗಳೂರು ರೈಲಿನಲ್ಲಿ ಸಂಚರಿಸುತ್ತಿರುವ ಯಾತ್ರಿಕರ ಮೊಬೈಲ್ ಫೋನ್, ಲೇಡೀಸ್ ಬ್ಯಾಗ್ ಕಳವುಗೈಯುತ್ತಿದ್ದ ಆರೋಪಿ ಸುಳ್ಯದ ಯುವಕನನ್ನು ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು – ಬೆಂಗಳೂರು ಸಂಚರಿಸುವ ರೈಲಿನಿಂದ ಸುಳ್ಯದ ಕಲ್ಲುಮುಟ್ಲು ನಿವಾಸಿ 19 ವರ್ಷದ ಯುವಕ ಅಬ್ದುಲ್ ಅಜೀಜ್ ಎಂಬುವವನು ಮಂಗಳೂರು ರೈಲ್ವೆ ಪೊಲೀಸರು ಬಂದಿಸಿರುವುದಾಗಿ ತಿಳಿದುಬಂದಿದೆ. ಪ್ರಯಾಣಿಕರು ನಿದ್ರೆಯಲ್ಲಿರುವ ಸಂದರ್ಭದಲ್ಲಿ ಕಳವುಗೈಯುತ್ತಿದ್ದ ಎಂದು ವಿಚಾರಣೆ ವೇಳೆ

ಮಂಗಳೂರು: ರೈಲು ಪ್ರಯಾಣಿಕರ ಬ್ಯಾಗಿಗೆ‌ ಕನ್ನ ಹಾಕುತ್ತಿದ್ದ ಖದೀಮ| ಸುಳ್ಯ ಮೂಲದ‌ ವ್ಯಕ್ತಿಯ ಬಂಧಿಸಿದ ಪೊಲೀಸರು| Read More »

ಹೊಸವರ್ಷದಂದು ಅನಗತ್ಯವಾಗಿ ಓಡಾಡಿದರೆ ಕೇಸ್ – ಕಮಲ್ ಪಂತ್

ಬೆಂಗಳೂರು: ಒಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ಡಿ.28ರಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಡಿಸೆಂಬರ್ 28ರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಕರ್ಫ್ಯೂ ಸಂದರ್ಭದಲ್ಲಿ ಯಾರೂ ಹೊರಗಡೆ ಅನಗತ್ಯವಾಗಿ ಓಡಾಟ ನಡೆಸುವಂತಿಲ್ಲ. ಎಲ್ಲೆಡೆ ನಾಕಾಬಂದಿ ಹಾಕಿ ನಿರ್ಬಂಧ ವಿಧಿಸಲಾಗುತ್ತಿದ್ದು, ಅನಗತ್ಯವಾಗಿ ಓಡಾಡಿದರೆ ಕೇಸ್ ಹಾಕಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್‌ಪಂತ್ ಹೇಳಿದ್ದಾರೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.

ಹೊಸವರ್ಷದಂದು ಅನಗತ್ಯವಾಗಿ ಓಡಾಡಿದರೆ ಕೇಸ್ – ಕಮಲ್ ಪಂತ್ Read More »

ಮುರ್ಡೇಶ್ವರಕ್ಕೆ ಪತಿಯೊಂದಿಗೆ ಬಂದಿದ್ದ ನವ ವಿವಾಹಿತೆ ನಾಪತ್ತೆ!

ಮುರ್ಡೇಶ್ವರ: ಪತಿಯೊಂದಿಗೆ ಪ್ರಸಿದ್ಧ ಪ್ರವಾಸಿ ತಾಣಕ್ಕೆ ಬಂದ ನವವಿವಾಹಿತೆ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನವವಿವಾಹಿತೆಯೊಬ್ಬಳು ಪತಿಯೊಂದಿಗೆ ಮುರ್ಡೇಶ್ವರಕ್ಕೆ ಬಂದಿದ್ದಳು. ಈ ವೇಳೆ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿ ರೂಮ್ ನೋಡಲು ಪತಿ ಗೆಸ್ಟ್ ಹೌಸ್ ಗೆ ಹೋಗಿ ವಾಪಸ್ ಬಂದು ನೋಡಿದಾಗ ಪಾರ್ಕಿಂಗ್ ಸ್ಥಳದ ಕಟ್ಟೆ ಮೇಲೆ ಕುಳಿತಿದ್ದ ಮಹಿಳೆ ಕಾಣೆಯಾಗಿದ್ದಾಳೆ. ಗೋವಾದ ವಾಸ್ಕೋಡಗಾಮ ಬೈನಾದ ನಿವಾಸಿ ವಿದ್ಯಾ ಸಂದೀಪ ಹರಿಜನ ಕಾಣೆಯಾದ ಮಹಿಳೆ. ಎಷ್ಟು ಹುಡುಕಿದರೂ ಮಹಿಳೆ ಪತ್ತೆಯಾಗಿಲ್ಲ. ಹೀಗಾಗಿ

ಮುರ್ಡೇಶ್ವರಕ್ಕೆ ಪತಿಯೊಂದಿಗೆ ಬಂದಿದ್ದ ನವ ವಿವಾಹಿತೆ ನಾಪತ್ತೆ! Read More »

ಕಡಬ: ವಾಹನ ಢಿಕ್ಕಿ ಹೊಡೆದು ಮೃತಪಟ್ಟ ಚಿರತೆ ಮರಿ!?

ಕಡಬ: ಚಿರತೆ ಮರಿಯನ್ನೇ ಹೋಲುವ ಪ್ರಾಣಿಯೊಂದು ವಾಹನದ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಡಬದಲ್ಲಿ ನಡೆದಿದೆ. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ಈ ಘಟನೆ ‌ನಡೆದಿದ್ದು ಇಂದು ಬೆಳಿಗ್ಗೆ ಈ ವಿಚಾರ ಬೆಳಕಿಗೆ ಬಂದಿದೆ. ಚಿರತೆಯನ್ನು ಹೋಲುವ ಈ ಪ್ರಾಣಿಯು ಅಪರಿಚಿತ ವಾಹನದ ಅಡಿಗೆ ಬಿದ್ದಿದ್ದು, ರಸ್ತೆಯಲ್ಲೇ ಸಾವನ್ನಪ್ಪಿದೆ. ಇದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ

ಕಡಬ: ವಾಹನ ಢಿಕ್ಕಿ ಹೊಡೆದು ಮೃತಪಟ್ಟ ಚಿರತೆ ಮರಿ!? Read More »

ಕಪಾಳಕ್ಕೆ ಹೊಡೆದ ಅತ್ತಿಗೆಯನ್ನು ರೇಪ್ ಮಾಡಿ ಕೊಂದ ಕಿರಾತಕ ಹೆಣವನ್ನೂ ಅತ್ಯಾಚಾರಗೈದ..!

ಬಿಹಾರ: ಮುಜಾಫರ್‌ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನು ಕೊಲೆಗೈದಿದ್ದ. ಆಕೆ ಸಾಯುವುದಕ್ಕೂ ಮುನ್ನ ಮತ್ತು ಸತ್ತ ನಂತರ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಬುಧವಾರ ಬಂಧಿಸಲಾಗಿದ್ದು ಆರೋಪಿ ಅತ್ಯಾಚಾರ ಎಸಗಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರ ಎಸಗಿದ ನಂತರ ಸಂತ್ರಸ್ತೆಯನ್ನು ಗ್ರೈಂಡರ್ ಗೆ ಬಳಸುತ್ತಿದ್ದ ಕಲ್ಲಿನಿಂದ ಜಜ್ಜಿ ಕೊಂದಿದ್ದಾನೆ. ಆಕೆ ಸತ್ತ ಮೇಲೆಯೂ ತನ್ನ ಕಾಮ ತೃಷೆ ತೀರಿಸಿಕೊಂಡಿದ್ದಾನೆ. ಕ್ರೂರಿಯ ದಾಳಿ ಕಾರಣಕ್ಕೆ ಸಂತ್ರಸ್ತೆಯ ಮುಖ ಮತ್ತು ತಲೆ ಜಜ್ಜಿಹೋಗಿದ್ದು ಆಕೆಯ ದಂತಪಂಕ್ತಿ

ಕಪಾಳಕ್ಕೆ ಹೊಡೆದ ಅತ್ತಿಗೆಯನ್ನು ರೇಪ್ ಮಾಡಿ ಕೊಂದ ಕಿರಾತಕ ಹೆಣವನ್ನೂ ಅತ್ಯಾಚಾರಗೈದ..! Read More »