ಅಪಘಾತ: ಶಬರಿಮಲೆಯಿಂದ ಮರಳುತ್ತಿದ್ದ ಇಬ್ಬರು ಸಾವು

ಚಿಕ್ಕಬಳ್ಳಾಪುರ: ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಬಳಿ ನಡೆದಿದೆ.

Ad Widget ... ..

ಶಬರಿಮಲೆಗೆ ಹೋಗಿ ಅಯ್ಯಪ್ಪ ದರ್ಶನ ಪಡೆದು ವಾಪಸ್ ಬರುವ ವೇಳೆ ದುರ್ಘಟನೆ ನಡೆದಿದೆ. ಧರಣೀಶ್ (22) ನಿರಂಜನ್ ಸಿಂಗ್ (52) ಮೃತ ದುರ್ಧೈವಿಗಳು. ಮೃತಪಟ್ಟರೆಲ್ಲಾ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯವರು ಎಂದು ಗುರುತಿಸಲಾಗಿದೆ.

Ad Widget

ಪಂಚರ್ ಆಗಿದ್ದ ಕಾರನ್ನು ರಸ್ತೆ ಬದಿ ನಿಲ್ಲಿಸಿ ಸ್ಟೆಪ್ನಿ ಬದಲಾಯಿಸುತ್ತಿದ್ದ ವೇಳೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂರು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ಮಾಡಿ ಕ್ಯಾಂಟರ್ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸದ್ಯ ಈ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *