Ad Widget .

ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಹುಚ್ಚಾಟ ಮೆರೆದವನ ಬಂಧನ

Ad Widget . Ad Widget . Ad Widget . Ad Widget .

ಮಂಗಳೂರು: ಅಂಬ್ಯುಲೆನ್ಸ್ ಗೆ ದಾರಿ ಬಿಡದೆ ಸತಾಯಿಸಿ ಪುಂಡಾಟ ಮೆರೆದಿದ್ದ ಯುವಕನನ್ನ ಪೊಲೀಸರು ಬಂಧಿಸಿದ್ದಾರೆ. ಮೋನಿಶ್ ಬಂಧಿತ ಕಾರು ಚಾಲಕನಾಗಿದ್ದು, ಬುಧವಾರ ಮಂಗಳೂರಿನಿಂದ ಭಟ್ಕಳಕ್ಕೆ ರೋಗಿಯೊಬ್ಬರನ್ನು ಆಯಂಬುಲೆನ್ಸ್​​​ನಲ್ಲಿ ಕೊಂಡೊಯ್ಯುತ್ತಿದ್ದಾಗ ಆರೋಪಿ ಮೋನಿಶ್ ಕಾರು ಅಡ್ಡಾದಿಡ್ಡಿ ಚಲಾಯಿಸಿ ದಾರಿ ಬಿಡದೆ ಸತಾಯಿಸಿದ್ದ.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಿಂದ ಉಡುಪಿಯವರೆಗೆ ಸುಮಾರು 40 ಕಿಲೋಮೀಟರ್ ಈತ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟಿರಲಿಲ್ಲ. KA19 Md 6843 ಎಂಬ ರಿಜಿಸ್ಟ್ರೇಷನ್ ನಂಬರ್​ನ ಕಾರಿನ ಚಾಲಕ ಈ ರೀತಿ ಸತಾಯಿಸಿದ್ದಾನೆ.

ಈ ಘಟನೆಯನ್ನು ಅಂಬ್ಯುಲೆನ್ಸ್ ನಲ್ಲಿದ್ದ ಸಿಬ್ಬಂದಿ ವಿಡಿಯೋ ಮಾಡಿದ್ದರು. ಇಷ್ಟು ಮಾತ್ರವಲ್ಲದೇ ರಾತ್ರಿ ಮಣಿಪಾಲದಿಂದ ಮಂಗಳೂರಿಗೆ ಬರುತ್ತಿದ್ದ ಅಂಬ್ಯುಲೆನ್ಸ್​​​ಗೂ ಈತ ದಾರಿ ಬಿಡದೆ ಸತಾಯಿಸಿದ್ದಾನೆ. ಈತನ‌ ದುರ್ವರ್ತನೆಯ ವಿಡಿಯೋ ಇಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಕಾರು ಚಾಲಕನನ್ನು ಪೊಲೀಸರು ಬಂಧಿಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

Leave a Comment

Your email address will not be published. Required fields are marked *