Ad Widget .

ಬುಧವಾರ(ಫೆ.16)ದಿಂದ ಕಾಲೇಜುಗಳು ಮತ್ತೆ ಆರಂಭ – ಸಚಿವ ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್ ವಿವಾದದಿಂದ ಮುಚ್ಚಲ್ಪಟ್ಟಿದ್ದ ಕಾಲೇಜುಗಳನ್ನು ಬುಧವಾರದಿಂದ ಮತ್ತೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Ad Widget . Ad Widget . Ad Widget . Ad Widget .

ಮುಖ್ಯಮಂತ್ರಿಗಳ ಸಭೆ ಬಳಿಕ ಮಾತನಾಡಿದ ಅವರು ಹೈಕೋರ್ಟ್ ಆದೇಶದಂತೆ ಈಗಿರುವ ವಸ್ತ್ರ ಸಂಹಿತೆ ಆದೇಶ ಕಡ್ಡಾಯಗೊಳಿಸಿ ತರಗತಿಗಳನ್ನು ಪುನರಾರಂಭಗೊಳಿಸಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಶಾಲಾ ಕಾಲೇಜುಗಳ ಆವರಣದಲ್ಲಿ ಬಿಗಿ ಭದ್ರತೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Ad Widget . Ad Widget .

ರಾಜ್ಯದಲ್ಲಿ ಈಗಾಗಲೇ ಹೈಸ್ಕೂಲ್ ವರೆಗಿನ ತರಗತಿಗಳು ಆರಂಭವಾಗಿದ್ದು, ಸುಸೂತ್ರವಾಗಿ ನಡೆಯುತ್ತಿವೆ. ಹಿಜಾಬ್ ಕುರಿತ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದು, ಕೋರ್ಟ್ ತರಗತಿ ನಡೆಸುವಂತೆ ಆದೇಶಿಸಿದೆ.

Leave a Comment

Your email address will not be published. Required fields are marked *