ಉಕ್ರೇನ್ ನಿಂದ 240 ಭಾರತೀಯರ ಏರ್ ಲಿಪ್ಟ್| ವಿದೇಶಾಂಗ ಇಲಾಖೆ ಸ್ಪಷ್ಟನೆ|

Ad Widget ... ..

ಸಮಗ್ರ ನ್ಯೂಸ್: ಆಪರೇಷನ್ ಗಂಗಾ ಅಡಿಯಲ್ಲಿ 240 ಭಾರತೀಯ ಪ್ರಜೆಗಳೊಂದಿಗೆ ದೆಹಲಿಗೆ ಮೂರನೇ ವಿಮಾನವು ಹಂಗೇರಿಯ ಬುಡಾಪೆಸ್ಟ್‌ನಿಂದ ಟೇಕಾಫ್ ಆಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಇಂದು ಬೆಳಿಗ್ಗೆ ಮಾಹಿತಿ ನೀಡಿದ್ದಾರೆ.

Ad Widget

240 ಭಾರತೀಯ ಪ್ರಜೆಗಳೊಂದಿಗೆ ಮೂರನೇ ವಿಮಾನವು ಬುಡಾಪೆಸ್ಟ್‌ನಿಂದ ದೆಹಲಿಗೆ ಹೊರಟಿದೆ’ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ನಡೆಯುತ್ತಿರುವ ಉಕ್ರೇನ್-ರಷ್ಯಾ ಬಿಕ್ಕಟ್ಟಿನ ಮಧ್ಯೆ, ಗಡಿ ಪೋಸ್ಟ್‌ಗಳಲ್ಲಿ ಸರ್ಕಾರಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಹೊಂದಾಣಿಕೆಯಿಲ್ಲದೆ ಯಾವುದೇ ಗಡಿ ಚೆಕ್‌ಪೋಸ್ಟ್‌ಗಳಿಗೆ ತೆರಳದಂತೆ ಕೈವ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಸಲಹೆ ನೀಡಿದೆ. ಇದುವರೆಗೆ ಒಟ್ಟು 469 ಭಾರತೀಯ ಪ್ರಜೆಗಳನ್ನು ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲಾಗಿದ್ದು, ಈ ಪೈಕಿ 250 ಮಂದಿ ಇಂದು ಬೆಳಗ್ಗೆ ದೆಹಲಿಗೆ ಬಂದಿಳಿದಿದ್ದು, 219 ಮಂದಿ ಶನಿವಾರ ಸಂಜೆ ಮುಂಬೈಗೆ ಬಂದಿಳಿದಿದ್ದಾರೆ.

Leave a Comment

Your email address will not be published. Required fields are marked *