ಸಮಗ್ರ ನ್ಯೂಸ್: ಫೆ.20ರಂದು ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಸ್ಥರಿಗೆ, ರಾಜ್ಯ ಸರ್ಕಾರ ಇದೀಗ 25 ಲಕ್ಷ ಪರಿಹಾರವನ್ನು ಘೋಷಿಸಿದೆ. ಈ ಕುರಿತಂತೆ ಮಾಹಿತಿ ನೀಡಿದ ಸಚಿವ ಈಶ್ವರಪ್ಪ ಮಾಹಿತಿ ನೀಡಿದ್ದಾರೆ.
ಮಾರ್ಚ್ 6ರಂದು ಹರ್ಷ ಮನೆಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ನಾನು ಹೋಗಿ ಪರಿಹಾರ ನೀಡುವುದಾಗಿ ಈಶ್ವರಪ್ಪ ತಿಳಿಸಿದರು.
ಅಂದ ಹಾಗೇ ಹರ್ಷ ಹತ್ಯೆಯ ಬಳಿಕ, ಉದ್ವಿಗ್ನ ಸ್ಥಿತಿ ಶಿವಮೊಗ್ಗ ನಗರದಲ್ಲಿ ಉಂಟಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಶಾಲಾ-ಕಾಲೇಜು ಬಂದ್ ಕೂಡ ಮಾಡಲಾಗಿತ್ತು. ಈ ಬಳಿಕ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಲಾಗಿತ್ತು. ಇದೀಗ ನಗರ ಸಹಜ ಸ್ಥಿತಿಗೆ ತಲುಪಿದೆ.







