ಪಂಚರಾಜ್ಯ ಚುನಾವಣೆ ಸೋಲು| ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಿಗೆ ‘ಪಂಚ್’ಕಜ್ಜಾಯ

Ad Widget ... ..

ಸಮಗ್ರ ನ್ಯೂಸ್: ಪಂಚ ರಾಜ್ಯಗಳ ಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್ ನಾಯಕತ್ವದಲ್ಲಿ ಭಾರಿ ಬದಲಾವಣೆಯಾಗಲಿದೆ ಅನ್ನೋ ಲೆಕ್ಕಾಚಾರ ಉಲ್ಟಾ ಆಗಿತ್ತು. ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಸೋನಿಯಾ ಗಾಂಧಿ ಹಾಗೂ ಗಾಂಧಿ ಪರಿವಾರದಿಂದಲೇ ಕಾಂಗ್ರೆಸ್ ಶಕ್ತವಾಗಿ ಮುನ್ನಡೆಸಲು ಸಾಧ್ಯ ಅನ್ನೋ ಅಭಿಪ್ರಾಯ ವ್ಯಕ್ತವಾಗಿತ್ತು.

Ad Widget

ಆದರೆ ಯಾರೂ ಕೂಡ ಸೋಲಿನ ಹೊಣೆ ಹೊತ್ತಿರಲಿಲ್ಲ. ಇದೀಗ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಚುನಾವಣಾ ಸೋಲಿಗೆ ಹೊಣೆಯಾಗಿಸಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸೇರಿದಂತೆ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಜಾಗೊಳಿಸಿದ್ದಾರೆ. ಗೋವಾ, ಮಣಿಪುರ, ಉತ್ತರಖಂಡ ಹಾಗೂ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ವಜಾ ಮಾಡಲಾಗಿದೆ.

Leave a Comment

Your email address will not be published. Required fields are marked *