ಮಳೆ ಅನಾಹುತ; ಸಿಡಿಲಿಗೆ ಯುವಕ ಬಲಿ, ಎತ್ತುಗಳು ಆಹುತಿ

ಸಮಗ್ರ ನ್ಯೂಸ್: ಮಳೆ ಅನಾಹುತದಲ್ಲಿ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬಂಕನೇರಿ ಗ್ರಾಮದಲ್ಲಿ ನಡೆದಿದೆ. ನಾಗರಾಜ (22) ಮೃತಪಟ್ಟವರು. ಶೇಂಗಾ ಬೆಳೆಯ ಬಣವೆಗೆ ತಾಡಪಲ್ ಹೊದಿಸುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

. Ad Widget . Ad Widget

ವಿಜಯಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಅಲ್ಲದೇ, ಗಾಳಿ ಮಳೆಗೆ ಮನೆ ಪತ್ರಾಸ್​ಗಳು ಹಾರಿ ಹೋಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ವಿಜಯಪುರ ನಗರ, ಆಲಮಟ್ಟಿ, ತಾಳಿಕೋಟೆ ಸಿಂದಗಿ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಕಳೆದ ಒಂದು ವಾರದ ಹಿಂದೆ ಸಂಭವಿಸಿದ್ದ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದಲ್ಲಿ ತೋಟಗಾರಿಕೆ ಹಾಗೂ ಕೃಷಿ ಬೆಳೆ ನೆಲಕಚ್ಚಿದ್ದವು.‌

. Ad Widget . . Ad Widget . Ad Widget

Leave a Comment

Your email address will not be published. Required fields are marked *