ಕಳಚಿದ ಬಲಿಪ ಪರಂಪರೆಯ ಮತ್ತೊಂದು ಕೊಂಡಿ| ಯಕ್ಷಗಾನದ ಮೇರು ಪ್ರತಿಭೆ ಪ್ರಸಾದ್ ಭಾಗವತ ಇನ್ನಿಲ್ಲ

ಸಮಗ್ರ ನ್ಯೂಸ್: ಯಕ್ಷಗಾನ ರಂಗದ ತೆಂಕುತಿಟ್ಟಿನ ಅಗ್ರಗಣ್ಯ ಬಲಿಪ ಪರಂಪರೆಯ ಕೊಂಡಿಯೊಂದು ಕಳಚಿ ಹೋಗಿದ್ದು, ಭಾಗವತಿಕೆಯಲ್ಲಿ ಹೆಸರಾಗಿದ್ದ ಬಲಿಪ ಪ್ರಸಾದ ಭಾಗವತರು ಸೋಮವಾರ ಇಹಲೋಕ ತ್ಯಜಿಸಿದ್ದಾರೆ.

Ad Widget ... ..

ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ತನ್ನ ಪರಂಪರೆಯ ವಿಶಿಷ್ಟ ಕಂಚಿನ ಕಂಠದ ಮೂಲಕ ಅಪಾರ ಜನಪ್ರಿಯತೆ ಪಡೆದಿದ್ದರು. ಪ್ರಸಾದ್ ಅವರು ತಂದೆ ಖ್ಯಾತ ಭಾಗವತ ನಾರಾಯಣ ಬಲಿಪ , ಪತ್ನಿ, ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಪ್ರಸಾದ ಬಲಿಪರು ದೇವಿ ಮಹಾತ್ಮೆ, ಕಟೀಲು ಕ್ಷೇತ್ರ ಮಹಾತ್ಮೆ ಸೇರಿದಂತೆ ಏರು ಪದ್ಯಗಳ ಮೂಲಕ ಬಲಿಪ ಪರಂಪರೆಯ ಶೈಲಿಯ ಪ್ರತಿನಿಧಿಯಾಗಿ ಭಾಗವತನ ಸ್ಥಾನ ತುಂಬಿದ್ದರು.

ಬಲಿಪರ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Leave a Comment

Your email address will not be published. Required fields are marked *