ಮಂಗಳೂರು: ಹಂಪನಕಟ್ಟೆ ಅಪಘಾತ ಪ್ರಕರಣ| ಬಸ್ ಚಾಲಕನ ಬಂಧನ

ಸಮಗ್ರ ನ್ಯೂಸ್: ನಗರದ ಹಂಪನಕಟ್ಟೆ ಬಳಿ ಬೈಕ್‌ಗೆ ಖಾಸಗಿ ಬಸ್ ಢಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನನ್ನು ಟ್ರಾಫಿಕ್ ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

. Ad Widget . Ad Widget

ಬಸ್ ಚಾಲಕ ಬಿಜು ಮೋನುವಿನ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಅಪಘಾತ ಸಂಭವಿಸಿದೆ ಎಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಚಾಲಕನನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಎ.26ರ ವರೆಗೆ ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

. Ad Widget . . Ad Widget . Ad Widget

ಸುರತ್ಕಲ್ ಜನತಾ ಕಾಲನಿಯಿಂದ ರೂಟ್ ನಂಬರ್ 45 ಜಿ ಸಂಖ್ಯೆಯ ಖಾಸಗಿ ಬಸ್‌ನ್ನು ಬಿಜು ಚಲಾಯಿಸಿಕೊಂಡು ಬರುತ್ತಿದ್ದರು. ಹಂಪನಕಟ್ಟೆ ಬಳಿ ಬರುವಾಗ ಬಳ್ಳಾಲ್‌ಬಾಗ್ ನಿವಾಸಿ ಡೇಲನ್ ಚಲಾಯಿಸಿಕೊಂಡು ಬರುತ್ತಿದ್ದ ಬೈಕ್‌ಗೆ ಬಸ್ ಢಿಕ್ಕಿಯಾಗಿ ಬಸ್ ಮತ್ತು ಬೈಕ್ ಎರಡೂ ಬೆಂಕಿಗೆ ಆಹುತಿಯಾಗಿದ್ದವು. ಬೈಕ್ ಸವಾರ ಡೇಲನ್ ಅವರ ಕಾಲಿಗೆ ಅಪಘಾತದಲ್ಲಿ ಗಂಭೀರ ಗಾಯವಾಗಿತ್ತು. ಎ. 8ರಂದು ಘಟನೆ ಸಂಭವಿಸಿತ್ತು.

Leave a Comment

Your email address will not be published. Required fields are marked *