ಕರ್ನಾಟಕದ ”ಸೇವಾಸಿಂಧು” ಪೋರ್ಟಲ್ ಗೆ ಕೇಂದ್ರ ಪ್ರಶಸ್ತಿಯ ಗರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸರ್ಕಾರದ ಮುಡಿಗೆ ಮತ್ತೊಂದು ಪ್ರಶಸ್ತಿಯ ಗರಿ ದೊರೆತಿದೆ. ಸರ್ಕಾರದ ಸೇವಾ ಸಿಂಧು ಪೋರ್ಟಲ್‌ಗೆ ಕೇಂದ್ರ ಸರ್ಕಾರದ ಉತ್ಕೃಷ್ಟ ಪ್ರಶಸ್ತಿ ದೊರೆತಿದೆ.

Ad Widget ... ..

ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ಸರ್ಕಾರ ನೀಡುವ ಸುಗಮ ಸೇವೆ ವಿಭಾಗದ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದ್ದು, ದೆಹಲಿ ವಿಜ್ಞಾನ ಭವನದಲ್ಲಿ ಪ್ರಧಾನಿ ಮೋದಿ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

Ad Widget

ರಾಜ್ಯ ಸರ್ಕಾರದ ಪರ ಐಎಎಸ್‌ ಅಧಿಕಾರಿ ದೀಪ್ತಿ ಆದಿತ್ಯ ಕಾನಡೆ ಪ್ರಶಸ್ತಿ ಸ್ವೀಕರಿಸಿದರು. ಉತ್ಕೃಷ್ಟ ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ನೀಡುವ ಪ್ರಶಸ್ತಿ ಇದಾಗಿದ್ದು, ಮಾನವ ಮಧ್ಯಪ್ರದೇಶವಿಲ್ಲದೇ ಸೇವೆ ನೀಡುವ ವಿಭಾಗವಾಗಿದೆ. ಇಲ್ಲಿ ಆರಂಭದಿಂದ ಅಂತ್ಯದವರೆಗೆ ಸುಗಮ ಸೇವೆಯನ್ನ ಪರಿಗಣಿಸಲಾಗುತ್ತದೆ.

Leave a Comment

Your email address will not be published. Required fields are marked *