ಗೆಳೆಯನ‌ ಶವ ಊರಿಗೆ ಕೊಂಡೊಯ್ಯುತ್ತಿದ್ದವರೂ ಜವರಾಯನ ಬಳಿಗೆ| ಭೀಕರ ಅಪಘಾತದಲ್ಲಿ ಮೂವರು ಮಿತ್ರರು ದುರ್ಮರಣ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಗೆಳೆಯನ ಶವವನ್ನು ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಿತ್ರರು ಮಾರ್ಗಮಧ್ಯೆ ಭೀಕರ ಅಪಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಗೊಲ್ಲಪಲ್ಲಿ ಬಳಿ ನಡೆದಿದೆ.

Ad Widget ... ..

ಅಪಘಾತದಲ್ಲಿ ಅಂಬರೀಷ್ (30), ಗೋವಿಂದ್ (35) ದೇವರಾಜ್ (34) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರು ಚಾಲಕ ಉಸ್ಮಾನ್ ಪಾಷಾ ಹಾಗೂ ಯಲ್ಲಾಲಿಂಗ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಸಾವಿಗೀಡಾದವರು ಹಾಗೂ ಗಾಯಾಳುಗಳು ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

Ad Widget

ಇವರ ಸ್ನೇಹಿತ ಬಸಯ್ಯ ಎಂಬಾತ ನಿನ್ನೆ ಬೆಂಗಳೂರಿನ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದ. ಆತನ ಶವವನ್ನು ತೆಗೆದುಕೊಂಡು ನಿನ್ನೆ ರಾತ್ರಿ ಬೆಂಗಳೂರಿನಿಂದ ಹೊರಟು ಯಾದಗಿರಿ ಜಿಲ್ಲೆಯ ವಡಗೇರಾ ಎಂಬಲ್ಲಿಗೆ ಹೊರಟಿದ್ದರು.

ಇವರು ಬೆಂಗಳೂರಿನಿಂದ ಮೂರು ಕಾರು ಹಾಗೂ ಒಂದು ಆಂಬ್ಯುಲೆನ್ಸ್​ನಲ್ಲಿ ಹೊರಟಿದ್ದು, ಆ ಪೈಕಿ ಒಂದು ಕಾರು ಪಂಕ್ಚರ್​ ಆಗಿ ಹಿಂದೆ ಉಳಿದಿತ್ತು. ನಂತರ ಇವರು ಹೊರಟಿದ್ದು ಮಾರ್ಗಮಧ್ಯೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಕಾರು ಮತ್ತು ಇವರಿದ್ದ ಕಾರು ಮುಖಾಮುಖಿ ಡಿಕ್ಕಿ ಆಗಿದ್ದವು. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು ರಸ್ತೆಯಾಚೆಗೆ ಪಲ್ಟಿಯಾಗಿತ್ತು. ಗಾಯಾಳುಗಳನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *