April 2022

ಸಚಿವ ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ

ಸಮಗ್ರ ನ್ಯೂಸ್: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್​.ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್​ ಸೂಚನೆ ನೀಡಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್​​ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕಮಾಂಡ್, ಈಶ್ವರಪ್ಪ ರಾಜೀನಾಮೆಗೆ ಸೂಚನೆ ನೀಡಿದೆ. ಹೀಗಾಗಿ, ನಾಳೆ ಸಂಜೆಯೊಳಗೆ ಈಶ್ವರಪ್ಪ ರಾಜೀನಾಮೆ ಸಲ್ಲಿಸಲಿದ್ದಾರೆ. ಈ ಸಂಬಂಧ ಸಚಿವ ಈಶ್ವರಪ್ಪ ಈಗಾಗಲೇ ಸಿಎಂ ಜೊತೆಗೆ ಚರ್ಚೆ ನಡೆಸಿದ್ದಾರೆ. ಈಶ್ವರಪ್ಪ ಬೆಳಗ್ಗೆಯೇ ಮೈಸೂರಿನಿಂದ ತವರು ಜಿಲ್ಲೆ ಶಿವಮೊಗ್ಗಕ್ಕೆ ತೆರಳುತ್ತಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಸಚಿವ ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ Read More »

ಉಡುಪಿ: ಇನ್ನೂ ತೆರವಾಗದ ಸಂತೋಷ್ ಪಾಟೀಲ್ ಶವ| ಈಶ್ವರಪ್ಪ ಬಂಧನವಾಗದೆ ಹೆಣ ಎತ್ತಲ್ಲ ಎಂದು ಕುಟುಂಬದವರ ಪಟ್ಟು

ಸಮಗ್ರ ನ್ಯೂಸ್: ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಮೃತದೇಹ ​​ ಉಡುಪಿ ಶಾಂಭವಿ ಲಾಡ್ಜ್​​ ರೂಂನಲ್ಲೇ ಇದ್ದು, ಬೆಳಗ್ಗೆ 9 ಗಂಟೆ ನಂತರ ತೆರವು ಸಾಧ್ಯತೆ ಆಗಲಿದೆ. ಈಶ್ವರಪ್ಪ ಅರೆಸ್ಟ್ ಆಗದೇ ಅಂತ್ಯ ಸಂಸ್ಕಾರ ಮಾಡಲ್ಲ ಎಂದು ಕುಟುಂಬದವರು ಪಟ್ಟು ಹಿಡಿದಿದ್ದಾರೆ. ಕುಟುಂಬ ಸದಸ್ಯರ ಮುಂದೆ ಪಂಚನಾಮೆ, ಪಂಚನಾಮೆ ಮುಗಿದ ಮೇಲೆ ಮೃತ ದೇಹ ಹೊರಕ್ಕೆ ಕೊಡಲಾಗುತ್ತದೆ. ಸದ್ಯ ಕೊಠಡಿ ಸಂಖ್ಯೆ 207ರಲ್ಲೇ ಮೃತದೇಹ ಇದೆ. ಕುಟುಂಬ ಸದಸ್ಯರ ಸಮ್ಮುಖದಲ್ಲೇ ಮೃತದೇಹ ಹೊರಕ್ಕೆ ತರಲಾಗುತ್ತದೆ. ಮೃತದೇಹ

ಉಡುಪಿ: ಇನ್ನೂ ತೆರವಾಗದ ಸಂತೋಷ್ ಪಾಟೀಲ್ ಶವ| ಈಶ್ವರಪ್ಪ ಬಂಧನವಾಗದೆ ಹೆಣ ಎತ್ತಲ್ಲ ಎಂದು ಕುಟುಂಬದವರ ಪಟ್ಟು Read More »

ಬಿಜೆಪಿ ಯನ್ನು ಕಿತ್ತೆಸೆಯೋಕೆ‌‌ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ? ಸಿದ್ದು ಮಾತಿಗೆ ತಿರುಗೇಟು ನೀಡಿದ ಶ್ರೀರಾಮುಲು

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಜೆಪಿಯನ್ನು ಕಿತ್ತೊಗೆಯಿರಿ ಹೇಳಿಕೆಗೆ ಸಚಿವ ಶ್ರೀರಾಮುಲು ಬಿಜೆಪಿ ಯನ್ನು ಕಿತ್ತೆಸೆಯೋಕೆ‌‌ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ? ಎಂದು ಪ್ರಶ್ನಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಯಾರಿಗೂ ಬೇಡವಾದ ಕೂಸಾಗಿದ್ದಾರೆ. ಹೀಗಾಗಿ ಬಿಜೆಪಿಯನ್ನು ಕಿತ್ತೊಗೆಯಿರಿ ಎಂದು ಹೇಳಿದ್ದು, ಬಿಜೆಪಿ ಯನ್ನು ಕಿತ್ತೆಸೆಯೋಕೆ‌‌ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ?, ಬಿಜೆಪಿ ರಾಜ್ಯದಲ್ಲಿ ದೇಶದಲ್ಲಿ ಆಲದ ಮರವಾಗಿ ಬೆಳೆದಿದೆ. ಬಿಜೆಪಿ ಕಾರ್ಮಿಕ ವರ್ಗಕ್ಕೆ ಶಕ್ತಿಯನ್ನು ತುಂಬಿದೆ. ಪ್ರಧಾನಿ

ಬಿಜೆಪಿ ಯನ್ನು ಕಿತ್ತೆಸೆಯೋಕೆ‌‌ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ? ಸಿದ್ದು ಮಾತಿಗೆ ತಿರುಗೇಟು ನೀಡಿದ ಶ್ರೀರಾಮುಲು Read More »

ಪರೀಕ್ಷೆ ಬರೆಯುತ್ತಿದ್ದಾಗ ಶಿಕ್ಷಕನಿಂದಲೇ ದೌರ್ಜನ್ಯ| ಫೋಕ್ಸೋ ದಾಖಲು

ಸಮಗ್ರ ನ್ಯೂಸ್: ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಶಿಕ್ಷಕ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರೂ ಪೊಲೀಸ್ ಠಾಣಾ ವ್ಯಾಪ್ತಿ ಬಳಿ ನಡೆದಿದೆ. ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿರುವ 45 ವರ್ಷದ ಪರಮೇಶ್ ಐರಣಿ 16 ವರ್ಷದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಹೆಚ್ಚಿಗೆ ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತಿಸಿದ್ದನು. ಏಪ್ರೀಲ್ 8ರಂದು ನಡೆದಿದ್ದ‌ ಈ ಪ್ರಕರಣ ತಡವಾಗಿ

ಪರೀಕ್ಷೆ ಬರೆಯುತ್ತಿದ್ದಾಗ ಶಿಕ್ಷಕನಿಂದಲೇ ದೌರ್ಜನ್ಯ| ಫೋಕ್ಸೋ ದಾಖಲು Read More »

WTO ಒಪ್ಪಿದರೆ ವಿಶ್ವಕ್ಕೆ ಆಹಾರ ಪೂರೈಸುತ್ತೇವೆ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಅನುಮತಿ ನೀಡಿದರೆ, ವಿಶ್ವಕ್ಕೆ ಭಾರತದ ಆಹಾರ ದಾಸ್ತಾನು ಪೂರೈಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಗುಜರಾತ್‌ನ ಅದಲಾಜ್‌ನಲ್ಲಿ ಶ್ರೀ ಅನ್ನಪೂರ್ಣ ಧಾಮ್ ಟ್ರಸ್ಟ್‌ನ ಹಾಸ್ಟೆಲ್ ಮತ್ತು ಶಿಕ್ಷಣ ಸಂಕೀರ್ಣವನ್ನು ವೀಡಿಯೊ ಲಿಂಕ್ ಮೂಲಕ ಉದ್ಘಾಟಿಸಿದ ನಂತರ ಮೋದಿ ಮಾತನಾಡಿ ರಷ್ಯಾ ಉಕ್ರೇನ್ ಬಿಕ್ಕಟ್ಟಿನಿಂದ ವಿಶ್ವದ ವಿವಿಧ ಭಾಗಗಳಲ್ಲಿ ಆಹಾರ ಸಂಗ್ರಹಣೆ ಕ್ಷೀಣಿಸುತ್ತಿದೆ, ಇಂದು ಜಗತ್ತು ಅನಿಶ್ಚಿತ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಲ್ಲಾ ಬಾಗಿಲುಗಳು ಮುಚ್ಚಿರುವುದರಿಂದ ಪೆಟ್ರೋಲ್, ತೈಲ ಮತ್ತು

WTO ಒಪ್ಪಿದರೆ ವಿಶ್ವಕ್ಕೆ ಆಹಾರ ಪೂರೈಸುತ್ತೇವೆ – ಪ್ರಧಾನಿ ಮೋದಿ Read More »

ಮಡಿಕೇರಿ: ಮಹಡಿಯಿಂದ ಬಿದ್ದು ಮಗು ಸಾವು

ಸಮಗ್ರ ನ್ಯೂಸ್: ಆಟವಾಡುತ್ತಿದ್ದ ಮಗುವೊಂದು ಮಹಡಿ ಮೇಲಿಂದ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಡಿಕೇರಿ ತಾಲೂಕಿನ ವಿರಾಜಪೇಟೆಯಲ್ಲಿ ನಡೆದಿದೆ. ಇಲ್ಲಿನ ಗೌರಿಕೆರೆ ಬಡಾವಣೆ ನಿವಾಸಿ ಮುನೀರ್ ಎಂಬವರ ಪುತ್ರ ನಾಲ್ಕು ವರ್ಷದ ತಫೀನ್ ಮೃತಪಟ್ಟ ‌ಬಾಲಕ. ಇಂದು ಮಧ್ಯಾಹ್ನ ಸುಮಾರಿಗೆ ಘಟನೆ ಸಂಭವಿಸಿದ್ದು, ಆಯತಪ್ಪಿ ಕೆಳಬಿದ್ದ ಮಗುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಫಲಿಸದೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಮಡಿಕೇರಿ: ಮಹಡಿಯಿಂದ ಬಿದ್ದು ಮಗು ಸಾವು Read More »

ಸಂತೋಷ್ ಆತ್ಮಹತ್ಯೆ ಹಿನ್ನಲೆ| ಅರುಣ್ ಸಿಂಗ್ ರಿಂದ ಹೈಕಮಾಂಡ್ ಗೆ ಗ್ರೌಂಡ್ ರಿಪೋರ್ಟ್; ಸಚಿವ ಈಶ್ವರಪ್ಪ ‌ತಲೆದಂಡ!?

ಸಮಗ್ರ‌ ನ್ಯೂಸ್: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಹೈಕಮಾಂಡ್ ಗೆ ರಿಪೋರ್ಟ್ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಯಾವುದೇ ಕ್ಷಣದಲ್ಲಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ. ರಾಜ್ಯ ಪ್ರವಾಸದಲ್ಲಿರುವ ಅರುಣ್ ಸಿಂಗ್ ಅವರು ಸಂತೋಷ್ ಪಾಟೀಲ್ ಆತ್ಮಹತ್ಯೆ, ಈಶ್ವರಪ್ಪ ವಿರುದ್ಧದ ಡೆತ್ ನೋಟ್ ಮತ್ತು ಕಾಂಗ್ರೆಸ್ ಡೆಡ್ ಲೈನ್ ಬಗ್ಗೆ ಹೈಕಮಾಂಡ್ ಗೆ ಮಾಹಿತಿ ರವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ರಾಜೀನಾಮೆ ನೀಡುವುದು ಪಕ್ಕಾ ಆಗಿದೆ. ಒಂದು

ಸಂತೋಷ್ ಆತ್ಮಹತ್ಯೆ ಹಿನ್ನಲೆ| ಅರುಣ್ ಸಿಂಗ್ ರಿಂದ ಹೈಕಮಾಂಡ್ ಗೆ ಗ್ರೌಂಡ್ ರಿಪೋರ್ಟ್; ಸಚಿವ ಈಶ್ವರಪ್ಪ ‌ತಲೆದಂಡ!? Read More »

ಈಶ್ವರಪ್ಪ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಸಂತೋಷ್ ಆತ್ಮಹತ್ಯೆ| ಕೇಸ್ ದಾಖಲಿಸಿದ ಕುಟುಂಬ| ರಾಜೀನಾಮೆ ಕೊಡ್ತಾರಾ ಈಶ್ವರಪ್ಪ?

ಸಮಗ್ರ ನ್ಯೂಸ್: ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವುದು ಸಚಿವ ಈಶ್ವರಪ್ಪ ಅವರಿಗೆ ಸಂಕಷ್ಟ ತಂದೊಡ್ಡಿದ್ದು, ಅವರ ತಲೆದಂಡ ಆಗುವುದು ಖಚಿತ ಎನ್ನಲಾಗಿದೆ. ರಾಜ್ಯದಲ್ಲಿ 2-3 ತಿಂಗಳಿಂದ ಒಂದೊಂದೆ ವಿವಾದ ಹುಟ್ಟುತ್ತಿದ್ದು, ಬಿಜೆಪಿ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಗುತ್ತಿಗೆದಾರರಿಂದ ಶೇ. 40 ಕಮಿಷನ್ ಆರೋಪ, ರಾಷ್ಟ್ರಧ್ವಜ ಕುರಿತು ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆ, ಹರ್ಷ ಕೊಲೆ ಪ್ರಕರಣ, ಹಿಜಾಬ್, ಹಲಾಲ್,

ಈಶ್ವರಪ್ಪ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಸಂತೋಷ್ ಆತ್ಮಹತ್ಯೆ| ಕೇಸ್ ದಾಖಲಿಸಿದ ಕುಟುಂಬ| ರಾಜೀನಾಮೆ ಕೊಡ್ತಾರಾ ಈಶ್ವರಪ್ಪ? Read More »

ಸಚಿವ ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ‌ ಮಾಡಿದ್ದ ಸಂತೋಷ್ ಹೆಣವಾಗಿ ಪತ್ತೆ

ಸಮಗ್ರ ನ್ಯೂಸ್: ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ 40 % ಕಮಿಷನರ್ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಮೃತದೇಹ ಉಡುಪಿಯ ಲಾಡ್ಜ್ ಒಂದರಲ್ಲಿ ಪತ್ತೆಯಾಗಿದೆ. ಅಲ್ಲದೆ, ಲಾಡ್ಜ್ ನಲ್ಲಿ ಡೆಟ್ ನೋಟ್ ಪತ್ತೆಯಾಗಿದ್ದು, ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ. ಸಚಿವರ ವಿರುದ್ಧ ಶಿಕ್ಷೆಯಾಗಬೇಕು, ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು , ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕು ಎಂದು ಪತ್ರದಲ್ಲಿ ಉಲ್ಲೇಖ

ಸಚಿವ ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ‌ ಮಾಡಿದ್ದ ಸಂತೋಷ್ ಹೆಣವಾಗಿ ಪತ್ತೆ Read More »

ಸಾಲ ಕೊಟ್ಟವರ ಹೆಸರು‌ ಬರೆದಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ

ಸಮಗ್ರ ನ್ಯೂಸ್: ತನ್ನ 24 ಸಾವಿರ ಸಾಲವನ್ನು ತೀರಿಸಲಾಗದೆ ಯುವಕನೋರ್ವ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಕಾಟೀಪಳ್ಳ ನಿವಾಸಿ ಕಂಡ್ರಿಕ್ ಲಾರೆನ್ಸ್ ಡಿ ಸೋಜ ( 20) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ಮೃತ ಯುವಕನಿಗೆ ಕುಡಿತದ ಚಟವಿದ್ದು ಗೆಳೆಯರಲ್ಲಿ ಸಾಲ ಮಾಡಿಕೊಂಡಿದ್ದ. ಕೆಲಸಕ್ಕೆ ರಜೆ ಹಾಕಿದ್ದ ಯುವಕ ನಿನ್ನೆ ಸುಮಾರು 11.30 ಕ್ಕೆ ಮನೆಯಿಂದ ಹೊರಟು ಹೋಗಿದ್ದ. ಬಳಿಕ ಎಲ್ಲೆಡೆ ಹುಡುಕಾಡಿದಾಗ ನಿನ್ನೆ ಸಂಜೆ ಸುರತ್ಕಲ್ ಠಾಣಾ

ಸಾಲ ಕೊಟ್ಟವರ ಹೆಸರು‌ ಬರೆದಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ Read More »