ಇನ್ನೂ ನಾಲ್ಕು ದಿನ‌ ಮಳೆ ಸಂಭವ- ಹವಾಮಾನ ಇಲಾಖೆ ಮಾಹಿತಿ

ಸಮಗ್ರ ನ್ಯೂಸ್: ಕಳೆದೆರಡು ಮೂರು ದಿನಗಳಿಂದ ಸುರಿಯುತ್ತಿರುವ ಗುಡುಗು ಸಹಿತ ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ, ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಮತ್ತೆ ಮುಂದಿನ ನಾಲ್ಕು ದಿನ ರಾಜ್ಯಾಧ್ಯಂತ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿದೆ.

. Ad Widget . Ad Widget . Ad Widget .

ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ಮೇ.6ರಿಂದ ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ, ಕರ್ನಾಟಕದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಮುಂದಿನ ನಾಲ್ಕು ದಿನ ಕರ್ನಾಟಕ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Leave a Comment

Your email address will not be published. Required fields are marked *