ಕುಣಿಗಲ್ : ವಿದ್ಯುತ್ ಸ್ಪರ್ಶಿಸಿ ಜೂ. ರವಿಚಂದ್ರನ್ ಸಾವು

ಸಮಗ್ರ ನ್ಯೂಸ್: ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಸಂಗೀತ ಸಂಜೆ ಕಾರ್ಯಕ್ರಮದ ಕಲಾವಿದನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಕುಣಿಗಲ್ ಕಸಬಾ ಹೋಬಳಿ ಹೇರೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ.

Ad Widget ... ..

ಹೇರೂರು ಗ್ರಾಮದ ಲಕ್ಷ್ಮಿ ನಾರಾಯಣ (35) (ಜೂನಿಯರ್ ರವಿಚಂದ್ರನ್) ಮೃತ ದುರ್ದೈವಿ. ಜೂನಿಯರ್ ರವಿಚಂದ್ರನ್ ಎಂದೇ ಪ್ರಖ್ಯಾತಗೊಂಡಿದ್ದ ಸಂಗೀತ ಸಂಜೆ ಕಾರ್ಯಕ್ರಮದ ಕಲಾವಿಧ ಲಕ್ಷ್ಮಿ ನಾರಾಯಣ ಮಂಗಳವಾರ ತಮ್ಮ ಮನೆಯ ಸಂಪ್‌ಗೆ ನೀರು ತುಂಬಿಸಲೆಂದು ಮೋಟರ್ ಸ್ವಿಚ್ ಹಾಕಲು ಯತ್ನಿಸಿದ್ದಾರೆ ಎನ್ನಲಾಗಿದ್ದು, ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Ad Widget

Leave a Comment

Your email address will not be published. Required fields are marked *