ಉಡುಪಿ: ಉದ್ಯಾವರ ಸಮೀಪ ಬಸ್ ಪಲ್ಟಿ, ಹಲವರು ಜಖಂ

ಸಮಗ್ರ ನ್ಯೂಸ್: ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಉಡುಪಿ-ಉದ್ಯಾವರ ಜಂಕ್ಷನ್ ಬಳಿ ಪಲ್ಟಿಯಾಗಿ ಪ್ರಯಾಣಿಕರು ಜಖಂಗೊಂಡ ಘಟನೆ ಇಂದು (ಮೇ.೧೨) ಮಧ್ಯಾಹ್ನ ‌ನಡೆದಿದೆ.

. Ad Widget . Ad Widget

ಬಸ್ ಚಲಿಸುತ್ತಿದ್ದ ವೇಳೆ ಓವರ್ ಟೇಕ್‌ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಬಳಿಕ ಡಿವೈಡರ್ ಗೆ ಹಾರಿ ಪಲ್ಟಿಯಾಗಿರುವುದಾಗಿ ಹೇಳಲಾಗುತ್ತಿದೆ. ಬಸ್ ನಲ್ಲಿ ಪ್ರಯಾಣಿಕರಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ್ದಾರೆ. ಹೆಚ್ಚಿನ ‌ಮಾಹಿತಿ‌ ನಿರೀಕ್ಷಿಸಲಾಗುತ್ತಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *