ಉಳ್ಳಾಲ: ಸಮುದ್ರ ಪಾಲಾದ ಮೈಸೂರಿನ ಮಹಿಳೆ

ಸಮಗ್ರ ನ್ಯೂಸ್: ಮಂಗಳೂರಿನ ಉಳ್ಳಾಲದ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯೊಬ್ಬರು ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಮೈಸೂರು ನಿವಾಸಿ ಭಾಗ್ಯಲಕ್ಷ್ಮೀ (45) ಮೃತ ದುರ್ದೈವಿ. ಭಾಗ್ಯಲಕ್ಷ್ಮೀ ದಂಪತಿ, ಅವರ ಮೂವರು ಪುತ್ರಿಯರು ಹಾಗೂ ಮೊಮ್ಮಗಳು ಮೈಸೂರಿನಿಂದ ಮಂಗಳೂರಿಗೆ ವಿಹಾರಕ್ಕೆಂದು ಬಂದಿದ್ದರು.

Ad Widget ... ..

ಪಂಪ್‌ವೆಲ್‌ ಬಳಿ ರೂಮಿನಲ್ಲಿ ತಂಗಿದ್ದ ಕುಟುಂಬ ಮೇ 28ರಂದು ಬೆಳಗ್ಗೆ ಸೋಮೇಶ್ವರ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದ್ದರು.

Ad Widget

ಅಲ್ಲಿಂದ ಉಳ್ಳಾಲದ ಸಮುದ್ರ ವಿಹಾರಕ್ಕೆಂದು ತೆರಳಿದ್ದ ಕುಟುಂಬದ ಪೈಕಿ ಭಾಗ್ಯಲಕ್ಷ್ಮೀ ಅವರು ಸಮುದ್ರದ ಅಲೆಯೊಂದಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ. ತತ್‌ಕ್ಷಣ ಕುಟುಂಬಸ್ಥರು ಕಿರುಚಲು ಆರಂಭಿಸಿದಾಗ, ಸಮೀಪದಲ್ಲಿ ಇದ್ದ ಶಿವಾಜಿ ಜೀವರಕ್ಷಕ ದಳದ ಸದಸ್ಯರು ದೌಡಾಯಿಸಿ ಮಹಿಳೆಯನ್ನು ಮೇಲ ಕ್ಕೆತ್ತಿದರು. ಆದರೆ ಅದಾಗಲೇ ಅವರು ಮೃತಪಟ್ಟಿದ್ದರು. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *