ಹಣದಾಸೆಗೆ ವಜ್ರದ ವ್ಯಾಪಾರಿಯ ಅಪಹರಣ| ಖಳನಟ ನಾರಾಯಣ್ ಸೇರಿದಂತೆ ನಾಲ್ಕು ಮಂದಿ‌ ಅರೆಸ್ಟ್

ಸಮಗ್ರ ನ್ಯೂಸ್: ಹಣಕ್ಕಾಗಿ ವಜ್ರದ ವ್ಯಾಪಾರಿಯನ್ನು ಅಪಹರಿಸಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಿ ತಲೆಮರೆಸಿಕೊಂಡಿದ್ದ ಪ್ರಕರಣದಲ್ಲಿ ಕನ್ನಡದ ಖಳನಟ ಸೇರಿ ನಾಲ್ವರನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ.

Ad Widget ... ..

ವೀರಪರಂಪರೆ, ದುಷ್ಟ ಹಾಗೂ‌ ಉಡಾ ಸೇರಿದಂತೆ 40ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಆರೋಪಿ ನಾರಾಯಣ ಹಾಗೂ ಸಹಚರರಾದ ಉಮೇಶ್, ನರ್ತನ್ ಹಾಗೂ ಅಶ್ವತ್ಥ ಎಂಬುವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ ಎಂದು ಕೇಂದ್ರ ವಿಭಾಗದ ಪ್ರಭಾರ ಡಿಸಿಪಿ ಶರಣಪ್ಪ ತಿಳಿಸಿದ್ದಾರೆ.

Ad Widget

ಕಳೆದ ತಿಂಗಳು 20ರಂದು ನಗರದ ಶಿವಾನಂದ ಸರ್ಕಲ್ ಬಳಿ ವಜ್ರದ ವ್ಯಾಪಾರಿಯನ್ನ ಆರೋಪಿಗಳು ಕಿಡ್ನಾಪ್ ಮಾಡಿದ್ದರು. ಅಪಹರಿಸಿ ಎರಡು ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿಗಳು ಕೊನೆಗೆ 25 ಲಕ್ಷ ರೂಪಾಯಿ ಹಣ ಪಡೆದು ಆರು ಚೆಕ್​ ಪಡೆದಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *