ರಾಜ್ಯಸಭೆ ಚುನಾವಣೆ: ಬಿಜೆಪಿ 2 ಕಾಂಗ್ರೆಸ್ 1ರಲ್ಲಿ ಗೆಲುವು ನಿಶ್ಚಿತ| 4 ನೇ ಸ್ಥಾನಕ್ಕಾಗಿ ಪೈಪೋಟಿ

ಸಮಗ್ರ ನ್ಯೂಸ್‌: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಇಂದು ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

. Ad Widget . Ad Widget

ಒಟ್ಟು ನಾಲ್ಕು ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ.ಆದರೆ, ನಾಲ್ಕನೇ ಸ್ಥಾನಕ್ಕಾಗಿ ಮೂರೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ನಡೆಸಿರುವುದರಿಂದ ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದಕ್ಕೆ ಇಂದಿನ ಸಂಜೆವರೆಗೆ ಕಾಯಬೇಕಾಗಿದೆ.

. Ad Widget . . Ad Widget . Ad Widget

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌ ಜಗ್ಗೇಶ್‌ ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಿಮೆ ನಿರ್ಧಾರವಾಗಿದೆ. ನಾಲ್ಕನೇ ಸ್ಥಾನಕ್ಕಾಗಿ ಬಿಜೆಪಿಯಿಂದ ಲೆಹರ್‌ ಸಿಂಗ್‌ ಸಿರೋಯ, ಕಾಂಗ್ರೆಸ್‌ನಿಂದ ಮನ್ಸೂರ್‌ ಅಲಿ ಖಾನ್‌ ಹಾಗೂ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ.

Leave a Comment

Your email address will not be published. Required fields are marked *