ದಲಿತ ಮುಖಂಡನ ಹತ್ಯೆ ಪ್ರಕರಣ|ಅಂಬೇಡ್ಕರ್ ರಕ್ಷಣಾ ವೇದಿಕೆ ಖಂಡನೆ

ಸಮಗ್ರ ನ್ಯೂಸ್: ತಮಕೂರಿನ ಗುಬ್ಬಿ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ಮಚ್ಚು-ಲಾಂಗ್ ನಿಂದ ಹಲ್ಲೆ ನಡೆಸಿ ದಲಿತ ಸಂಘರ್ಷ ಸಮಿತಿ ಮುಖಂಡರಾದ ನರಸಿಂಹಮೂರ್ತಿ 50 ವರ್ಷ ಎಂಬವರ ಬರ್ಬರ ಕೊಲೆ ಮಾಡಲಾಗಿದ್ದು, ಈ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ಮಾತನಾಡಿ ಇವತ್ತು ದಲಿತ ಸಮುದಾಯದವರನ್ನು ಎಲ್ಲಿ ಬೇಕೋ ಅಲ್ಲಿ ಕೊಲೆ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಲ್ಲಿಬೇಕಲ್ಲಿ ದಲಿತ ಸಮುದಾಯದ ಹೆಣ್ಣು ಮಕ್ಕಳ ಅತ್ಯಾಚಾರ ಕೊಲೆ ಈಗ ಹೆಚ್ಚಾಗಿ ನಡೆಯುತ್ತಿದೆ ಇದಕ್ಕೆಲ್ಲ ಪೊಲೀಸ್ ಇಲಾಖೆ ಸರಿಯಾದ ಕ್ರಮ ಕೈಗೊಳ್ಳಬೇಕು ಇಂಥವರಿಗೆಲ್ಲ ಜೈಲಿಗೆ ಕಲಿಸಬಾರದು ಇಂಥವರಿಗೆಲ್ಲ ಮರಣದಂಡನೆ ವಿಧಿಸುವಂತ ಕಾನೂನು ಸರಕಾರ ಮಾಡಬೇಕು ಇಲ್ಲದಿದ್ದರೆ ಈ ರೀತಿಯ ಪ್ರಕರಣಗಳು ಹೆಚ್ಚಾಗಬಹುದು.

Ad Widget ... ..

ಆದಕಾರಣ ಸಂಘಟನೆಯ ಮುಖಂಡರಾದ ನರಸಿಂಹಮೂರ್ತಿ ಇವರನ್ನು ಕೊಲೆ ಮಾಡಿರುವಂತ ಕೊಲೆಗಾರರಿಗೆ ಮರಣದಂಡನೆ ವಿಧಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಪಿ.ಸುಂದರ ಪಾಟಾಜೆಯವರು ಹೇಳಿದ್ದಾರೆ.

Ad Widget

Leave a Comment

Your email address will not be published. Required fields are marked *