ಬೆಚ್ಚಿಬಿದ್ದ ಕನ್ನಡ ಚಿತ್ರರಂಗ| ನಟ ಸತೀಶ್ ವಜ್ರ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಯುವ ನಟ ಸತೀಶ್ ವಜ್ರನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್.ನಗರದಲ್ಲಿ ನಡೆದಿದೆ.

Ad Widget ... ..

ಮನೆಯಲ್ಲಿಯೇ ದುಷ್ಕರ್ಮಿಗಳು ಸತೀಶ್ ನನ್ನು ಹತ್ಯೆಗೈದಿದ್ದು, ಚಾಕುವಿನಿಂದ ಇರಿದು ಕೊಂದಿದ್ದಾರೆ.
ಸ್ಥಳಕ್ಕೆ ಆರ್.ಆರ್.ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

ಸತೀಶ್ ಕನ್ನಡದ ಲಗೋರಿ ಚಿತ್ರದಲ್ಲಿ ನಟಿಸಿದ್ದರು. ಮೂಲತ: ಮದ್ದೂರು ಮೂಲದವರಾದ ಸತೀಶ್ ವಜ್ರ, ಪ್ರೀತಿಸಿ ವಿವಾಹವಾಗಿದ್ದರು. ಮೂರು ತಿಂಗಳ ಹಿಂದಷ್ಟೇ ಸತೀಶ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರು. ಸತೀಶ್ ಕಿರುಕುಳದಿಂದಲೇ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇದೀಗ ಸತೀಶ್ ನನ್ನು ಮನೆಯಲ್ಲಿಯೇ ಇರಿದು ಕೊಲ್ಲಲಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.

Leave a Comment

Your email address will not be published. Required fields are marked *