ಸಮಗ್ರ ನ್ಯೂಸ್ : ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆಯೊಂದು ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದ ರಸ್ತೆಯಲ್ಲಿ ನಡೆದಿದೆ.
ಮೃತಚಾಲಕನನ್ನು ಕೆಎಸ್.ರಾವ್ ನಗರ ವಿಜಯಪುರ ಕಾಲೊನಿ ನಿವಾಸಿ ಯಶವಂತರಾಯ ಎಂದು ಗುರುತಿಸಲಾಗಿದೆ.
ಗಾಯಗೊಂಡವರನ್ನು ಭಗವಂತರಾಯ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸಕ್ಕೆಂದು ಟೆಂಪೋದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು, ಚಾಲಕ ಹಾಗೂ ಮತ್ತಿಬ್ಬರು ಕೂಲಿ ಕಾರ್ಮಿಕರು ಟೆಂಪೋದ ಒಳಗೆ ಸಿಲುಕಿ ಒದ್ದಾಡುತ್ತಿದ್ದು, ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದರೂ ಚಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















