Ad Widget .

ನದಿಗೆ ಉರುಳಿದ ಕಾರು; 9 ಮಂದಿ ಜಲಸಮಾಧಿ

ಸಮಗ್ರ ನ್ಯೂಸ್: ಕಾರು ನದಿಗೆ ಉರುಳಿದ ಪರಿಣಾಮ 9 ಮಂದಿ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಉತ್ತರಾಖಂಡ್‌ ನ ರಾಮ್‌ ನಗರ್‌ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

Ad Widget . Ad Widget . Ad Widget . Ad Widget .

ಕಾರಿನಲ್ಲಿ ಒಬ್ಬ ಮಹಿಳೆ ಹಾಗೂ ಮಗು ಸೇರಿದಂತೆ 11 ಮಂದಿ ಪ್ರಯಾಣಿಸುತ್ತಿದ್ದ ಕಾರು ನದಿಗೆ ಉರುಳಿದ್ದು, ಮೃತಪಟ್ಟವರೆಲ್ಲರೂ ಪಂಜಾಬ್‌ ಮೂಲದವರು ಎಂದು ತಿಳಿದು ಬಂದಿದೆ.

Ad Widget . Ad Widget .

ಶುಕ್ರವಾರ ಮುಂಜಾನೆ 5 ಗಂಟೆ ಸುಮಾರಿಗೆ ಕಾರು ನದಿಗೆ ಉರುಳಿದೆ. ಕಾರು ವೇಗವಾಗಿ ಚಲಿಸುತ್ತಿದ್ದು, ನದಿಯಲ್ಲಿ ಬಿದ್ದರೂ ಚಲಿಸುತ್ತಿದ್ದು, ನದಿ ಹರಿವಿನ ನಡುವೆ ಕಾರನ್ನು ನಿಯಂತ್ರಿಸಲು ಸ್ಥಳೀಯರು ವಿಫಲ ಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ನದಿ ಪಕ್ಕದಲ್ಲೇ ರಸ್ತೆ ಇದ್ದು, ಯಾವುದೇ ಅಡೆತಡೆಗಳು ಇಲ್ಲದ ಕಾರಣ ಪದೇಪದೆ ಈ ಜಾಗದಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ರಸ್ತೆ ಪಕ್ಕದಲ್ಲಿ ತಡೆಗೋಡೆ ನಿರ್ಮಿಸಲು ಸ್ಥಳೀಯ ಆಡಳಿತ ನಿರ್ಧರಿಸಿದೆ ಎನ್ನಲಾಗಿದೆ.

Leave a Comment

Your email address will not be published. Required fields are marked *