ತುಳು ಭಾಷೆ ಬಗ್ಗೆ ತುಚ್ಛ ಭಾವನೆ: ಉಪ್ಪಿನಂಗಡಿ ಕಾಲೇಜು ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳು ಗರಂ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶೇಖರ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ ಘಟನೆ ಆ.8ರಂದು ನಡೆದಿದೆ.

Ad Widget ... .. Ad Widget .

ಕಳೆದ ಆ.5 ಮತ್ತು ಆ.8ರಂದು ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ವತಿಯಿಂದ ಕಾಲೇಜಿನಲ್ಲಿ ‘ತುಳುನಾಡ ಐಸಿರಿ’ ಕಾರ್ಯಕ್ರಮ ನಡೆದಿತ್ತು. ಈ ಸಂದರ್ಭ ಕಾಲೇಜಿನ ಪ್ರಾಚಾರ್ಯರಾದ ಶೇಖರ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆನ್ನಲಾಗಿದೆ. ಈ ಬಗ್ಗೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಾಲೇಜಿನ ವರಾಂಡದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು.

Ad Widget

Leave a Comment

Your email address will not be published. Required fields are marked *