ಸುಳ್ಯ: ಕನಕಮಜಲಿನಲ್ಲಿ ತಲ್ವಾರ್ ಪ್ರದರ್ಶಿಸಿದ ಪ್ರಕರಣ

ಯುವಕನ ವಿರುದ್ಧ ಎಫ್ ಐಆರ್

Ad Widget ... ..

ಸಮಗ್ರ ನ್ಯೂಸ್: ಆ. 9 ರಂದು ತಲ್ವಾರ್ ಹಿಡಿದು ಊರಿಡೀ ಸುತ್ತಿ ಭಯದ ವಾತಾವರಣ ನಿರ್ಮಿಸಿದ ಯುವಕ ಇದೀಗ ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದರೂ ಈತ ಕ್ಷುಲ್ಲಕ ಕಾರಣಕ್ಕೆ ತಲ್ವಾರ್ ಹಿಡಿದುಕೊಂಡು ರಸ್ತೆಯಲ್ಲಿ ತಿರುಗಾಟ ನಡೆಸಿ ಹುಚ್ಚಾಟ ಪ್ರದರ್ಶಿಸಿದ್ದ. ಇದರಿಂದ ಸ್ಥಳೀಯರಲ್ಲಿ ಒಂದು ರೀತಿಯ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಈತನ ಅತಿರೇಕದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಆತನ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *