ಸಮಗ್ರ ನ್ಯೂಸ್: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯಲ್ಲಿ ಚಿಕ್ಕಮಾಗರಹಳ್ಳಿಯ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಕೇಸರಿ, ಬಿಳಿ, ಹಸಿರು ಎನ್ನುವ ಬದಲು ಕೆಂಪು, ಬಿಳಿ ಹಸಿರು ಎಂದು ತಪ್ಪಾಗಿ ಹೇಳಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದರು.
ಇದೀಗ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಮುಖಂಡ ಗಿರೀಶ್, ಮನು ಹಾಗೂ ಭಜರಂಗದಳದ ಶಿವು ಎಂಬುವರು ದೂರು ನೀಡಿದ್ದಾರೆ.
















