ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಆ.21 ರಂದು ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಮುಳುಗಡೆಯಾಗಿದ್ದ ಮಂಡ್ಯದ ಯುವಕನ ಶವ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿ ಇಂದು(ಆ.24) ಸಂಜೆ ಸುಮಾರಿಗೆ ಪತ್ತೆಯಾಗಿದೆ.

Ad Widget ... ..

ಮಂಡ್ಯದ ಸ್ವಾಮಿ ಎಂಬ ಯುವಕ ಆ.21 ರಂದು ಕುಮಾರಧಾರ ಸ್ನಾನಘಟ್ಟದಲ್ಲಿ ಸ್ನಾನಕ್ಕಿಳಿದಿದ್ದ ವೇಳೆ ನಾಪತ್ತೆಯಾಗಿದ್ದ. ಮೂರು ದಿನಗಳಿಂದ ಅಗ್ನಿಶಾಮಕ ಹಾಗೂ ಈಜು ತಜ್ಞರ ತಂಡ ಹುಡುಕಾಟ ನಡೆಸಿದರೂ ಶವ ದೊರಕಿರಲಿಲ್ಲ. ಇದೀಗ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಮತ್ತು ರವಿ ಕಕ್ಕೆಪದವುರವರ ಸತತ ಪ್ರಯತ್ನದ ಫಲವಾಗಿ ಕುಮಾರಧಾರದಿಂದ ಒಂದೂವರೆ ಕಿ.ಮೀ. ದೂರದಲ್ಲಿ ಮೃತದೇಹ ಪತ್ತೆಯಾಗಿದೆ.

Ad Widget

Leave a Comment

Your email address will not be published. Required fields are marked *