ವಿಭಿನ್ನ ರೀತಿಯಲ್ಲಿ ಮದುವೆಯಾದ ಜೋಡಿ ಹಕ್ಕಿಗಳು

ಸಮಗ್ರ ನ್ಯೂಸ್: ಸಂವಿಧಾನ ಶಿಲ್ಪಿ ಡಾ. ಬಿ.ಆರ್​.ಅಂಬೇಡ್ಕರ್ ಅವರ ಭಾವಚಿತ್ರದ ಮುಂದೆ ಪ್ರೇಮಿಗಳಿಬ್ಬರು ವಿವಾಹವಾಗಿದ್ದಾರೆ.

. Ad Widget . Ad Widget


ಆನೇಕಲ್ ತಾಲೂಕಿನ ಬಳ್ಳೂರು ಗ್ರಾಮದ ಯುವಕ ವಿರೇಶ್ ಮತ್ತು ಬಾಗಲಕೋಟೆ ಮೂಲದ ಅನುಪಮಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಹತ್ತು ವರ್ಷದಿಂದ ಅನುಪಮಾ ಕುಟುಂಬಸ್ಥರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದರು.

. Ad Widget . . Ad Widget . Ad Widget

ಆಗ ಪಿಯುಸಿ ಯಲ್ಲಿದ್ದಾಗ ಇವರಿಬ್ಬರ ನಡುವೆ ಪ್ರೀತಿ ಆರಂಭವಾಯಿತು. ಪಿಯು ಮುಗಿದ ಬಳಿಕ ವಿರೇಶ್ ಆಟೋ ಚಾಲಕನಾಗಿ ಕೆಲಸ ಮಾಡಲಾರಂಭಿಸಿದ, ಅನುಪಮಾ ಕಾಲೇಜು ಮುಗಿಸಿ ಮನೆಯಲ್ಲಿಯೇ ಇದ್ದಳು.

ಆದರೆ ಇವರಿಬ್ಬರ ಪ್ರೀತಿಗೆ ಎರಡೂ ಕುಟುಂಬಸ್ಥರಿಂದಲೂ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಆನೇಕಲ್ ಪಟ್ಟಣದ ಡಾ.ಅಂಬೇಡ್ಕರ್ ಪ್ರತಿಮೆ ಬಳಿ ದಲಿತ ಮುಖಂಡರುಗಳ ಸಮ್ಮುಖದಲ್ಲಿ ಬೌದ್ಧ ಧರ್ಮದ ಸಂಪ್ರದಾಯದಂತೆ ವಿವಾಹವಾಗಿದ್ದಾರೆ.

Leave a Comment

Your email address will not be published. Required fields are marked *